ಬೆಳಗಾವಿ : ಭಾರತ ಚುನಾವಣಾ ಆಯೋಗವು ಮೇ.೧೦ ೨೦೨೩ ಬುಧವಾರ ದಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ನಿಗದಿಪಡಿಸಿದೆ.
ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ ರ ಪ್ರಜಾ ಪ್ರತಿನಿಧಿ ಕಾಯ್ದೆ,
ಸೆಕ್ಷೆನ್ ೧೩೫ (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ರ್ಟೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-೧೯೬೩ ಕಲಂ ೩ (ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿ ಕೊಡಬೇಕಾಗಿ ತಿಳಿಸಿದ್ದಾರೆ.
ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.