Breaking News

ಮಳೆ ಅವಾಂತರದಿಂದಾ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ಕೆಸರು ಗದ್ದೆಯಲ್ಲಿ

Spread the love

ರಾಯಚೂರು: ಮಳೆ ಅವಾಂತರದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ಕೆಸರು ಗದ್ದೆಯಲ್ಲಿ ಸಿಲುಕಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ

ಸಿಂಧನೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದರು. ಬಿಜೆಪಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿ, ಭರ್ಜರಿ ಚುನಾವಣಾ ಪ್ರಚಾರ ಮಾಡಿ, ಕಲಬುರ್ಗಿಯತ್ತ ಪ್ರಧಾನಿ ಮೋದಿ ಸಾಗಿದ್ದಾರೆ. ಇದೇ ವೇಳೆ ಸಿಂಧನೂರಿನಲ್ಲಿ ಭಾರಿ ಮಳೆಯಾಗಿದ್ದು, ಪ್ರಧಾನಿ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ನಿಲ್ಲಿಸಿದ್ದ ಹೊಸಹಳ್ಳಿ ಹೆಲಿಪ್ಯಾಡ್ ಸಂಪೂರ್ಣ ಜಲಾವೃತಗೊಂಡಿದೆ. ಈ ಹೆಲಿಕಾಪ್ಟರ್ ನಲ್ಲಿ ಪ್ರಧಾನಿ ಭದ್ರತೆಗೆ ಆಗಮಿಸಿದ್ದ ಬೆಂಗಾವಲು ಪಡೆ ಸಿಬ್ಬಂದಿಗಳು ಇದ್ದರು. ಹೆಲಿಕಾಪ್ಟರ್ ಕೆಸರಿನಲ್ಲಿ ಸಿಲುಕಿಕೊಂಡಿದೆ.

ಜೆಸಿಬಿ ಮೂಲಕ ಹೆಲಿಕಾಪ್ಟರ್ ಮೇಲೆತ್ತಲು ಪ್ರಯತ್ನಿಸಲಾಗಿದ್ದು, 100ಕ್ಕೂ ಹೆಚ್ಚು ಜನರು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಕೆಸರು ಗದ್ದೆಯಲ್ಲಿ ಎಡಭಾಗಕ್ಕೆ ಹೆಲಿಕಾಪ್ಟರ್ ವಾಲಿದ್ದು, ಹೆಲಿಕಾಪ್ಟರ್ ಮೇಲೆಕೆತ್ತಲು ಹರಸಾಹಸ ನಡೆದಿದೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ