Breaking News

ಚಾರವನ್ನು ಅರ್ಧಕ್ಕೇ ಮೊಟಕುಗೊಳಿಸಿ ತೆರಳಿದ್ದಾರೆ. ಅಮಿತ್ ಶಾ

Spread the love

ಇಂಫಾಲ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.25ರಿಂದ ಕರ್ನಾಟಕ ರಾಜ್ಯಾದ್ಯಂತ ಪ್ರಚಾರ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರವನ್ನು ಅರ್ಧಕ್ಕೇ ಮೊಟಕುಗೊಳಿಸಿ ತೆರಳಿದ್ದಾರೆ.

ಮಣಿಪುರದಲ್ಲಿ ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದಿದ್ದು ಕಾನೂನು ತೀವ್ರ ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅವರು ಚುನಾವಣೆ ಪ್ರಚಾರ ಸಭೆಗಳನ್ನು ರದ್ದುಪಡಿಸಿದ್ದಾರೆ.

ಚುನಾವಣೆ ಪ್ರಚಾರ ಇನ್ನು ನಾಲ್ಕು ದಿನಗಳು ಮಾತ್ರ ನಡೆಯುವ ಹಿನ್ನೆಲೆಯಲ್ಲಿ ಅವರು ಪುನಃ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ ಬಗ್ಗೆ ಸಂದೇಹಗಳು ವ್ಯಕ್ತವಾಗಿವೆ.

ನಿಗದಿತ ಪ್ರವಾಸ ಪಟ್ಟಿಯಂತೆ ಅಮಿತ್ ಶಾ ಇಂದು ರಾಯಚೂರಿನಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದರು. “ರಾಜ್ಯದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಬಿಜೆಪಿ ಗೆಲ್ಲುವುದು ಶತಸಿದ್ಧ” ಎಂದು ವಿಶ್ವಾಸ ವ್ಯಕ್ತಪಡಿಸಿ ಶಾ ಮಣಿಪುರದತ್ತ ನಿರ್ಗಮಿಸಿದ್ದಾರೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ