Breaking News
Home / ಜಿಲ್ಲೆ / ಬಿಜಾಪುರ / ಯತ್ನಾಳ್​ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು,ನಿಮ್ಮನ್ನು ಏನು ಮಾಡಬೇಕು: ಹರಕು ಬಾಯಿಈಶ್ವರಪ್ಪ ಹೇಳಿಕೆಗೆ  ಅಭಿಮಾನಿ ಫೋಸ್ಟ್

ಯತ್ನಾಳ್​ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು,ನಿಮ್ಮನ್ನು ಏನು ಮಾಡಬೇಕು: ಹರಕು ಬಾಯಿಈಶ್ವರಪ್ಪ ಹೇಳಿಕೆಗೆ  ಅಭಿಮಾನಿ ಫೋಸ್ಟ್

Spread the love

ವಿಜಯಪುರ: ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ  ಅಭಿಮಾನಿ ಫೋಸ್ಟ್ ಮಾಡಿರುವುದನ್ನು ನಮ್ಮ ಖಾತೆಗೆ  ಹಂಚಿಕೊಳ್ಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದಾರೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಸಿಎಂ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾಡಿರುವ ಆರೋಪಕ್ಕೆ ನಿನ್ನೆ ಸಚಿವ ಕೆ.ಎಸ್.ಈಶ್ವರಪ್ಪ, ಯತ್ನಾಳ್​ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದರು.

ಈ ಹೇಳಿಕೆಗೆ ಖಾರವಾಗಿ ಫೇಸ್​​ಬುಕ್ ಮೂಲಕ ಯತ್ನಾಳ್​ ಬೆಂಬಲಿಗ ಎನ್ನಲಾದ ಅಂಕುಶ ವಸಿಷ್ಟ, ಈಶ್ವರಪ್ಪನವರೇ ಹರಕು ಬಾಯಿ ಯಾರದ್ದು ಅಂತ ನಮಗೆ ಚೆನ್ನಾಗಿ ಗೊತ್ತಿದೆ. ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸುವದಾದರೆ ನಿಮ್ಮನ್ನು ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಈ ಪೋಸ್ಟ್​​ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ತಮ್ಮ ಫೇಸ್​ಬುಕ್ ಅಕೌಂಟ್ ಮೂಲಕ ಟ್ಯಾಗ್ ಮಾಡಿದ್ದಾರೆ. ಇದರ ಜೊತೆ ಸಾಕಷ್ಟು ಲೈಕ್​​ಗಳು ಈ ಪೋಸ್ಟ್​​ಗಳಿಗೆ ಬಂದಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ರೀತಿ ಕರ್ನಾಟಕದಲ್ಲಿ ಬಸನಗೌಡ ಪಾಟೀಲ ಯತ್ನಾಳ್​ ಆಗಬೇಕು. ಬಸನಗೌಡ ಪಾಟೀಲ ಯತ್ನಾಳ್​ ಇಲ್ಲವೇ ಅನಂತಕುಮಾರ ಹೆಗಡೆ ಇಬ್ಬರು ರಾಜ್ಯದ ಸಿಎಂ, ಗೃಹ ಸಚಿವರಾಗಬೇಕು ಎಂದು ಪೋಸ್ಟ್ ಮೂಲಕ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ