ಚಿಕ್ಕಮಗಳೂರು:ಪ್ರಜಾಪ್ರಭುತ್ವದ ಹಬ್ಬ ಕಾಫಿನಾಡಿನಲ್ಲಿ ಜೋರಾಗಿದ್ದು, ಯುವಕರು, ಯುವತಿಯರು, ಮಹಿಳೆಯರು, ಪುರುಷರು ಅತ್ಯುತ್ಸಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಜಿಲ್ಲೆಯ ಮೂಡಿಗೆರೆಯಲ್ಲಿ ಬುಧವಾರ (ಮೇ 10) ಮದು ಮಗಳು ಹಸೆಮಣೆ ಏರುವ ಮೊದಲು ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಯವ ಮೂಲಕ ಮತದಾನದ ಮಹತ್ವವನ್ನು ಸಾರಿದ್ದಾರೆ.
ಮೂಡಿಗೆರೆಯ ಚಂದ್ರಾಪುರ ಗ್ರಾಮದ ಎಸ್.ಎಂ.ರಾಜು ಅವರ ಮಗಳಾದ ಸುಶ್ಮಿತ ಅವರ ವಿವಾಹವು ಬುಧವಾರ ಮೂಡಿಗೆರೆ ರೈತಭವನದಲ್ಲಿ ಇದ್ದು, ಮದುಮಗಳು ಶೃಂಗಾರಗೊಂಡು ಮಾಕೋನ ಹಳ್ಳಿಯಲ್ಲಿ ತೆರೆಯಲಾಗಿದ್ದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ನಂತರ ಮದುವೆ ಮಂಟಪಕ್ಕೆ ಆಗಮಿಸಿದ್ದರು.