Breaking News

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತ ಹಾಕುವಂತೆ ಮತದಾರರಿಗೆ ಎಲ್​ಇಡಿ ಟಿ.ವಿಗಳನ್ನ ಹಂಚಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ.!

Spread the love

ಬೆಂಗಳೂರು:  ರಾಜರಾಜೇಶ್ವರಿ ನಗರದ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತ ಹಾಕುವಂತೆ ಮತದಾರರಿಗೆ ಎಲ್​ಇಡಿ ಟಿ.ವಿಗಳನ್ನ ಹಂಚಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮುನಿರತ್ನ ಅವರ ಬೆಂಬಲಿಗ, ಮಾಜಿ ಬಿಬಿಎಂಪಿ ಸದಸ್ಯ ಜಿ.ಕೆ ವೆಂಕಟೇಶ್ ವಾರ್ಡ್ ನಂಬರ್ 37ರ ವಿ.ಆರ್. ಗಾರ್ಡನ್​​ನ ಖಾಸಿಂ ಸಾಬ್ ಎನ್ನುವವರಿಗೆ, ಎಲ್.ಜಿ. ಕಂಪನಿಯ ಎಲ್‌ಇಡಿ ಟಿವಿ ಕೊಟ್ಟಿದ್ದಾರೆ. ಟಿ.ವಿ. ಮೇಲೆ ಮುನಿರತ್ನ ಫೋಟೋ ಅಂಟಿಸಲಾಗಿದೆ.

ರಾಜರಾಜೇಶ್ವರಿ ‌ನಗರ ಕ್ಷೇತ್ರದ ಮತದಾರರಿಗೆ ಎಲ್.ಇ.ಡಿ. ಟಿವಿ ನೀಡಿ ಮುನಿರತ್ನ ಪರ ಮತ ಹಾಕುವಂತೆ ಆಮಿಷ ಒಡ್ಡಲಾಗುತ್ತಿದೆ ಎಂದು ದೂರಲಾಗಿದೆ. ಹೀಗಾಗಿ ವೆಂಕಟೇಶ್​ ಹಾಗೂ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ