ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣದ ಕಾನಬಾವಿಯಲ್ಲಿ ಪಾಕಿಸ್ತಾನ ಪರ ಬರಹ ಬರೆದು ಅದನ್ನು ವಾಟ್ಸಪ್ನಲ್ಲಿ ಪೋಸ್ಟ್ ಮಾಡಿರುವ ಆರೋಪದ ಹಿನ್ನೆಲೆ ಯುವಕನನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ ಘಟನೆ ನಡೆದಿದೆ.
ನಾಲತವಾಡ ಪಟ್ಟಣದ ಕಾನಬಾವಿ ಓಣಿಯ ನಿವಾಸಿ ವೀರೇಶ ಪರಯ್ಯ ಕರ್ಪೂರಮಠ (31) ಎಂಬಾತನನ್ನು ಇಲ್ಲಿನ ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ ವಿಜಯಪುರದ ದರ್ಗಾ ಜೈಲಿಗೆ ಕಳುಹಿಸಿದ್ದಾರೆ.
ವೀರೇಶ, ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ನ ಅಪ್ಪಾಜಿ ನಾಡಗೌಡರ ಹೆಸರಿನ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಬರಹವನ್ನು ಶೇರ್ ಮಾಡಿದ್ದ. ಇದು ಅಲ್ಲಿನ ಅನ್ಯ ಕೋಮಿನವರಿಗೆ ಗೊತ್ತಾಗಿ ಪೊಲೀಸ್ ಔಟ್ಪೋಸ್ಟ್ ಗೆ ಕರೆತಂದು ಪೊಲೀಸರ ವಶಕ್ಕೆ ಒಪ್ಪಿಸಿ ಕ್ರಮಕ್ಕೆ ಆಗ್ರಹಿಸಿದ್ದರು.