Breaking News

ಏಕಾಏಕಿ ಹೊತ್ತಿ ಉರಿದ ಕಾರು.!

Spread the love

ಬೆಳಗಾವಿ : ಬೆಳಗಾವಿಯ ಆರ್‌ಪಿಡಿ ವೃತ್ತದ ಸಮೀಪ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬ ಖಾನಾಪುರ ತಾಲೂಕಿನ ಅಸೋಗಾದಿಂದ ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಟಿಳಕವಾಡಿಯ ಆರ್‌ಪಿಡಿ ವೃತ್ತದ ಮಾರ್ಗವಾಗಿ ಬರುತ್ತಿದ್ದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದವರನ್ನು‌ ಕೆಳಗಿಳಿಸಿದ್ದಾನೆ. ಕಾರಿನಲ್ಲಿದ್ದವರು ಕೆಳಗೆ ಇಳಿಯುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ.ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದುರಂತವೊಂದು ತಪ್ಪಿದೆ ಎನ್ನಬಹುದು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ