Breaking News
Home / ರಾಜಕೀಯ / ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರ ಸಾವು

ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರ ಸಾವು

Spread the love

ಮಂಗಳೂರು: ಸುರತ್ಕಲ್ ಬಳಿ ಮೀನು ಹಿಡಿಯಲು ಬೀಸಿದ ಬಲೆಯಲ್ಲಿ ಮೀನುಗಾರರೊಬ್ಬರು ತಾವೇ ಸಿಲುಕಿ ಮೃತಪಟ್ಟಿದ್ದಾರೆ.

ಮೀನುಗಾರ ಜಯರಾಜ್ ಅವರು ಮೀನು ಹಿಡಿಯಲು ಬಲೆ ಬೀಸಿದ್ದರು. ಆ ಬಲೆಯಲ್ಲಿ ಅವರ ಕಾಲು ಸಿಲುಕಿತ್ತು. ಇದೇ ವೇಳೆ ಭಾರೀ ಗಾತ್ರದ ತೆರೆ ಬಂದು ಅಪ್ಪಳಿಸಿದಾಗ ಜಯರಾಜ್ ಅವರು ಬಲೆಯಲ್ಲಿ ಸುತ್ತಿಕೊಂಡು ಈಜಲಾಗದೆ ಮುಳುಗಿ ಮೃತಪಟ್ಟಿದ್ದಾರೆ.

ಘಟನೆ ಸಂಭವಿಸಿದ ವೇಳೆ ಅವರ ಜೊತೆಗಿದ್ದವರು ತಕ್ಷಣ ಸ್ಥಳೀಯರಿಗೆ ಮಾಹಿತಿ ತಿಳಿಸಿದ್ದು ಹಲವರು ರಕ್ಷಣೆಗೆ ಬಂದರೂ ಅವರನ್ನು ಬದುಕಿಸಲಾಗಲಲಿಲ್ಲ. ಜಯರಾಜ್ ಅವರಿಗೆ ಪತ್ನಿ, ಮಗಳು ಇದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ