Breaking News

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಡಿಸಿಎಂ ಸ್ಥಾನ ನೀಡಬೇಕು: ಮಲ್ಲಿಕಾರ್ಜುನ ಶ್ರೀಗಳ ಆಗ್ರಹ

Spread the love

ಧಾರವಾಡ: ಜಿಲ್ಲೆಯಿಂದ ಹೊರಗಿದ್ದುಕೊಂಡು ಐತಿಹಾಸಿಕ ಜಯ ಸಾಧಿಸಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಧಾರವಾಡ ಮುರುಘಾ ಮಠದ ಮಲ್ಲಿಕಾರ್ಜುನ ಶ್ರೀಗಳು ಒತ್ತಾಯಿಸಿದರು.

 

ಮುರುಘಾ ಮಠದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ವಧರ್ಮ ನಾಯಕನಾಗಿರುವ ವಿನಯ್ ಕುಲಕರ್ಣಿ ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ನಾಯಕರಾಗಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ಕೊಟ್ಟು ಗೌರವ ನೀಡಬೇಕು ಎಂದು ಆಗ್ರಹಿಸಿದರು. ಇದು ನಮ್ಮ ಸ್ವಂತದ ವಿಚಾರ, ಅವರು ಡಿಸಿಎಂ ಆಗಬೇಕು. ಲಿಂಗಾಯತ ನಾಯಕರಿಗೆ ನೀಡಬೇಕು. ಅದರಲ್ಲೂ ವಿನಯ್​ ಅವರಿಗೆ ನೀಡೋದು ಮುಖ್ಯ. ವಿನಯ್ ಅವರ ಬಗ್ಗೆ ವಿಶೇಷ ಒಲವು ನಮಗಿದೆ ಎಂದರು.

ಡಿಸಿಎಂ ಸ್ಥಾನಕ್ಕೆ ಸಮರ್ಥ ನಾಯಕರಾಗಿದ್ದಾರೆ. ಹಿಂದೆ ಮಂತ್ರಿ ಆಗಿ ಸಾಕಷ್ಟು ಅನುಭವ ಹೊಂದಿದ್ದಾರೆ. ಆಪಾದನೆ ಇದ್ದೇ ಇರುತ್ತೆ, ಅದರ ಬಗ್ಗೆ ಅಧಿಕೃತವಾಗಿ ಯಾವುದು ಹೊರಬಂದಿಲ್ಲ. ಅವರು ನಮ್ಮ ಮಠದ ಟ್ರಸ್ಟಿನ ಕಾರ್ಯಾಧ್ಯಕ್ಷ ಅನ್ನೋ ಸ್ವಾರ್ಥ ಇದೆ. ಹೀಗಾಗಿ ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು ಎಂದು ಶ್ರೀಗಳು ಆಗ್ರಹಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ