ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನ ಕಂಗಾಲಾಗಿದ್ದು, ಕೋರಮಂಗಲ ಸೇರಿದಂತೆ ಹಲವೆಡೆಗಳಲ್ಲಿ ರಸ್ತೆ ಜಲಾವೃತವಾಗಿದ್ದು, ಅಂಡರ್ ಪಾಸ್ಗಳು ತುಂಬಿ ತುಳುಕುತ್ತಿದ್ದವು.
ರಾತ್ರಿ ಬಿಟ್ಟು ಬಿಡದೆ ಮಳೆ ಸುರಿದಿದ್ದು, ಮೆಜೆಸ್ಟಿಕ್, ಕೋರಮಂಗಲ, ಯಶವಂತಪುರ, ನಂದಿನಿ ಲೇಔಟ್, ಬಸವನಗುಡಿ, ಕೆ.ಆರ್. ಮಾರ್ಕೆಟ್ ಸೇರಿದಂತೆ ವಿವಿಧ ಭಾಗಗಳಲ್ಲಿ ವರುಣ ಅಬ್ಬರಿಸಿದ್ದಾನೆ. ರಾತ್ರಿ ಒಂದೇ ಸಮ ಸುರಿದ ಮಳೆಗೆ ಕೊರಮಂಗಲ ರಸ್ತೆ ಜಲಾವೃತವಾಗಿತ್ತು. ಗುರುವಾರ ಸಂಜೆಯಿಂದಲೇ ಆರಂಭವಾದ ತುಂತುರು ಮಳೆ ಬಿಟ್ಟು ಬಿಡದೆ ಸುರಿದಿದೆ. ಇದರಿಂದಾಗಿ ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.
ಮಳೆಗೆ ಕೋರಮಂಗಲದ ಪಾಸ್ ಪೋರ್ಟ್ ರಸ್ತೆ ಜಲಾವೃತವಾಗಿತ್ತು. ಇನ್ನೂ ಹಲವೆಡೆ ಅಂಡರ್ ಪಾಸ್ ಹಾಗೂ ರಸ್ತೆಗಳು ನೀರಿನಿಂದ ತುಂಬಿದ್ದವು. ರಾತ್ರಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಹಲವರಿಗೆ ಕಿರಿ ಕಿರಿಯುಂಟಾಯಿತು. ಸ್ವಲ್ಪ ಪ್ರಮಾಣದ ಟ್ರಾಫಿಕ್ ಜಾಮ್ ಸಹ ಸಂಭವಿಸಿತು.