Breaking News

ಮಳೆ ಬಂದರೆ ಜನರು ಸಾಯಲೇಬೇಕೆ? H.D.K.

Spread the love

ಬೆಂಗಳೂರು : ನಗರದಲ್ಲಿ ಇಂದು ಸುರಿದ ಭಾರಿ ಮಳೆಯಿಂದ ಕೆ. ಆರ್. ವೃತ್ತದ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು.

ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತಿ ಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ? ಎಂದು ಹೆಚ್​ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ