Breaking News
Home / ರಾಜಕೀಯ / A.I.C.C. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದ ಬೆಳಗಾವಿ ಶಾಸಕರು

A.I.C.C. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದ ಬೆಳಗಾವಿ ಶಾಸಕರು

Spread the love

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿತು.

ನವದೆಹಲಿಯ ಖರ್ಗೆ ನಿವಾಸಕ್ಕೆ ತೆರಳಿದ ಸಚಿವ ಸತೀಶ್ ಜಾರಕಿಹೊಳಿ, ಶಾಸಕರುಗಳಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ಮಹೇಂದ್ರ ತಮಣ್ಣವರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಚಿಕ್ಕೋಡಿ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಖರ್ಗೆ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು.

ಜೊತೆಗೆ, ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮತ್ತಿತರ ವಿಷಯಗಳ ಕುರಿತು ಅವರೊಂದಿಗೆ ಚರ್ಚಿಸಿದರು


Spread the love

About Laxminews 24x7

Check Also

ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ

Spread the loveಚಿಕ್ಕೋಡಿ: ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ