Breaking News

ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯ

Spread the love

ರಾಮನಗರ: ವಿಧಾನಸಭಾ ಚುನಾವಣೆ ವೇಳೆ ಮತದಾರರ ಮನವೊಲಿಕೆಗೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕೂನಮುದ್ದನಹಳ್ಳಿಯಲ್ಲಿ ನಡೆದಿದೆ.

ಬಾಲಕಿ ಮಹಾಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾಳೆ. ಚುನಾವಣೆಯ ವೇಳೆ ನೀಡಿದ್ದ ಕುಕ್ಕರ್ ನಿಂದ ಮೊದಲ ಬಾರಿಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಕುಕ್ಕರ್ ಸಿಡಿದಿದ್ದು, ಬಾಲಕಿಯ ಮುಖ ಸೇರಿದಂತೆ ಹಲವೆಡೆ ಗಾಯಗಳಾಗಿವೆ.

ಗಾಯಾಳು ಬಾಲಕಿಯನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚುನಾವಣೆ ವೇಳೆ ಹಂಚುವ ಕುಕ್ಕರ್ ಗೆ ಮರುಳಾಗಬೇಡಿ ಎಂದು ಜನರಿಗೆ ವಿನಂತಿಸಿದ್ದೆ. ಈ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ

Spread the loveಚಿಕ್ಕೋಡಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುತಿಸಲ್ಪಟ್ಟ ರೌಡಿಶೀಟರ್‌ಗಳ ಮನೆಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ