Home / ರಾಜಕೀಯ / ಯಾರಿಗೆ ಯಾವ ಖಾತೆ? ಸಂಪೂರ್ಣ ವಿವರ..

ಯಾರಿಗೆ ಯಾವ ಖಾತೆ? ಸಂಪೂರ್ಣ ವಿವರ..

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಎಲ್ಲ 34 ಜನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಸಿದ್ದರಾಮಯ್ಯ ನಿರೀಕ್ಷೆಯಂತೆ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಇಲಾಖೆಗಳನ್ನು ನೀಡಲಾಗಿದೆ.

 ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಸಚಿವರುರಾಮಲಿಂಗಾರೆಡ್ಡಿಗೆ ಸಾರಿಗೆ ಇಲಾಖೆ: ಬೆಂಗಳೂರು ಅಭಿವೃದ್ಧಿ ಖಾತೆಗಾಗಿ ಹಿರಿಯ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ಹಲವರು ಬೇಡಿಕೆ ಇಟ್ಟಿದ್ದರೂ ಸಹ ಅಂತಿಮವಾಗಿ ಅದನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ. ಹಿರಿಯ ಸಚಿವರಾದ ರಾಮಲಿಂಗ ರೆಡ್ಡಿ ಅವರು ಸಾರಿಗೆ ಇಲಾಖೆ ನೀಡುವುದಕ್ಕೆ ಅಪಸ್ವರವೆತ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಜೊತೆ ಭಾನುವಾರ ಮಾತನಾಡಿ ಮನವೊಲಿಸಿ ಅವರಿಗೆ ಸಾರಿಗೆ ಇಲಾಖೆ ಖಾತೆ ನೀಡಿದ್ದಾರೆ.

ಗೃಹ ಇಲಾಖೆ ನೀಡುವ ಪ್ರಸ್ತಾಪಕ್ಕೆ ಮತ್ತೊಬ್ಬ ಹಿರಿಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅತೃಪ್ತಿ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಖಾತೆ ಬದಲಾವಣೆ ಮಾಡದೆ ಗೃಹ ಇಲಾಖೆಯನ್ನೇ ಅವರಿಗೆ ನೀಡಲಾಗಿದೆ. 2013 ರಲ್ಲಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಪರಮೇಶ್ವರ್ ಅವರಿಗೆ ಗೃಹ ಇಲಾಖೆ ನೀಡಲಾಗಿತ್ತು. ಈ ಬಾರಿಯೂ ಅವರಿಗೆ ಅದೇ ಇಲಾಖೆ ದೊರೆತಿದೆ.

 

 

ಡಾ.ಹೆಚ್.ಸಿ.ಮಹದೇವಪ್ಪಗೆ ಸಮಾಜ ಕಲ್ಯಾಣ: 2013 ರಲ್ಲಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಹಲವರಿಗೆ ಇದ್ದ ಖಾತೆಗಳು ಈ ಬಾರಿಯ ಸಿದ್ದರಾಮಯ್ಯ ಸಂಪುಟದಲ್ಲಿ ಲಭ್ಯವಾಗಿಲ್ಲ. ಸಿದ್ದರಾಮಯ್ಯ ಪರಮಾಪ್ತರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ಈ ಹಿಂದೆ ಲೋಕೋಪಯೋಗಿ ಖಾತೆಯನ್ನು ನೀಡಲಾಗಿತ್ತು. ಈ ಬಾರಿ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ.

ಹಿರಿಯ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಜಲ ಸಂಪನ್ಮೂಲ ಖಾತೆಯನ್ನು ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಲಾಗಿತ್ತು. ಈ ಬಾರಿ ಅವರಿಗೆ ಬೃಹತ್ ಕೈಗಾರಿಕೆ ಇಲಾಖೆ ಹಂಚಿಕೆ ಮಾಡಲಾಗಿದೆ. ಅದರಂತೆ ಕೆ.ಜೆ.ಜಾರ್ಜ್ ಅವರಿಗೆ ಈ ಮೊದಲು ಗೃಹ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಕೊಡಲಾಗಿತ್ತು. ಈ ಸಾರಿ ಇಂಧನ ಇಲಾಖೆ ನೀಡಲಾಗಿದೆ. ಕೃಷ್ಣ ಬೈರೇಗೌಡ ಅವರಿಗೆ ಈ ಹಿಂದೆ ಕಾನೂನು ಮತ್ತು ಸಂಸದೀಯ ಇಲಾಖೆ ನೀಡಲಾಗಿತ್ತು. ಈ ಸಲ ಅವರಿಗೆ ಕಂದಾಯ ಇಲಾಖೆಯಂತಹ ಮಹತ್ವದ ಇಲಾಖೆ ದೊರೆತಿದೆ. ಖಾತೆ ಹಂಚಿಕೆಯ ಸಂಪೂರ್ಣ ವಿವರ ಹೀಗಿದೆ..

ಮುಖ್ಯಮಂತ್ರಿ ಸಿದ್ದರಾಮಯ್ಯ – ಹಣಕಾಸು, ಆಡಳಿತ ಸುಧಾರಣೆ , ಗುಪ್ತಚರ, ವಾರ್ತಾ ಇಲಾಖೆ, ಐಟಿ ಬಿಟಿ, ಮೂಲಭೂತ ಸೌಲಭ್ಯ ಅಭಿವೃದ್ಧಿ ಹಾಗು ಹಂಚಿಕೆ ಮಾಡದಿರುವ ಇತರೆ ಖಾತೆಗಳು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ( ಬಿಡಿಎ, ಬಿಬಿಎಂಪಿ, ಜಲಮಂಡಳಿ, ಬಿಎಂಆರ್​ಡಿಎ, ಬಿಎಂಆರ್​ಸಿಎಲ್ ಇತ್ಯಾದಿ)

ಡಾ.ಜಿ.ಪರಮೇಶ್ವರ – ಗೃಹ

ಹೆಚ್.ಕೆ.ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗು ಪ್ರವಾಸೋದ್ಯಮ

ಕೆ.ಹೆಚ್.ಮುನಿಯಪ್ಪ – ಆಹಾರ ಮತ್ತು ನಾಗರೀಕ ಪೂರೈಕೆ , ಗ್ರಾಹಕ ಸೇವೆ

ರಾಮಲಿಂಗಾರೆಡ್ಡಿ – ಸಾರಿಗೆ

ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಕೆ.ಜೆ.ಜಾರ್ಜ್ – ಇಂಧನ

ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಡಾ.ಹೆಚ್.ಸಿ.ಮಹದೇವಪ್ಪ – ಸಮಾಜ ಕಲ್ಯಾಣ

ಸತೀಶ್​ ಜಾರಕಿಹೊಳಿ – ಲೋಕೋಪಯೋಗಿ

ಕೃಷ್ಣ ಭೈರೇಗೌಡ – ಕಂದಾಯ

ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

ಶಿವಾನಂದ ಪಾಟೀಲ್ – ಜವಳಿ , ಸಕ್ಕರೆ ಹಾಗು ಕೃಷಿ ಮಾರುಕಟ್ಟೆ

ಜಮೀರ್ ಅಹ್ಮದ್ – ವಸತಿ , ವಕ್ಫ್​ ಮತ್ತು ಅಲ್ಪಸಂಖ್ಯಾತ ಕಲ್ಯಾಣ

ಶರಣ ಬಸಪ್ಪ ದರ್ಶನಾಪೂರ್ – ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳು

ಈಶ್ವರ್​ ಖಂಡ್ರೆ – ಅರಣ್ಯ , ಪರಿಸರ ಮತ್ತು ಜೀವವೈವಿಧ್ಯ

ಚೆಲುವರಾಯಸ್ವಾಮಿ – ಕೃಷಿ

ಎಸ್.ಎಸ್.ಮಲ್ಲಿಕಾರ್ಜುನ – ಗಣಿಗಾರಿಕೆ, ಭೂವಿಜ್ಞಾನ ಮತ್ತು ತೋಟಗಾರಿಕೆ

ರಹೀಂ ಖಾನ್ – ಪೌರಾಡಳಿತ ಮತ್ತು ಹಜ್

ಸಂತೋಷ್ ಲಾಡ್ – ಕಾರ್ಮಿಕ

ಡಾ. ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ

ಆರ್.ಬಿ.ತಿಮ್ಮಾಪುರ – ಅಬಕಾರಿ

ಕೆ. ವೆಂಕಟೇಶ್ – ಪಶುಸಂಗೋಪನೆ ಮತ್ತು ರೇಷ್ಮೆ

ಶಿವರಾಜ ತಂಗಡಗಿ – ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

ಡಿ. ಸುಧಾಕರ್ – ಯೋಜನೆ ಮತ್ತು ಸಾಂಖಿಕ ಇಲಾಖೆ

ಬಿ.ನಾಗೇಂದ್ರ – ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟರ ಕಲ್ಯಾಣ

ಕೆ.ಎನ್.ರಾಜಣ್ಣ – ಸಹಕಾರ

ಭೈರತಿ ಸುರೇಶ್ – ನಗರಾಭಿವೃದ್ಧಿ ಮತ್ತು ನಗರ ಯೋಜನೆ ( ಬೆಂಗಳೂರು ನಗರ ಹೊರತುಪಡಿಸಿ )

ಲಕ್ಷ್ಮಿ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಮತ್ತು ಹಿರಿಯರ ಬಲ ಸಂವರ್ಧನೆ

ಮಂಕಾಳೆ ವೈದ್ಯ – ಮೀನುಗಾರಿಕೆ , ಬಂದರು ಮತ್ತು ಒಳನಾಡು ಸಾರಿಗೆ

ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಡಾ. ಎಂ.ಸಿ.ಸುಧಾಕರ್ – ಉನ್ನತ ಶಿಕ್ಷಣ

ಭೋಸರಾಜ್ – ಸಣ್ಣ ನೀರಾವರಿ , ವಿಜ್ಞಾನ ಮತ್ತು ತಂತ್ರಜ್ಞಾನ


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ