Breaking News

ಕೆರೆಯಲ್ಲಿ ಶವ ಪತ್ತೆ ಹಿನ್ನೆಲೆ: ನೀರಿಗಾಗಿ ಪರದಾಡುವ ಸಂದರ್ಭದಲ್ಲೂ ಕೆರೆ ಖಾಲಿ ಮಾಡಿಸಿದ ಗ್ರಾಮಸ್ಥರು

Spread the love

ಹುಬ್ಬಳ್ಳಿ: ಕೆರೆಯಲ್ಲಿಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಕಾರಣ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮಸ್ಥರು ಕೆರೆ ನೀರು ಕುಡಿಯಲು ಜನರು ಹಿಂದೇಟು ಹಾಕಿದ್ದರು.

ಹೀಗಾಗಿ ಗ್ರಾಮಸ್ಥರ ಪಟ್ಟಿಗೆ ಮಣಿದ ಜಿಲ್ಲಾಡಳಿತ ಕೆರೆಯ ನೀರನ್ನು ಪಂಪಸೆಟ್​ಗಳ ಮುಖಾಂತರ ಕೆರೆ ನೀರನ್ನು ಹೊರ ಹಾಕಲಾಗುತ್ತಿದೆ. ಆದರೆ, ಈಗ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಎರಡು ಕೊಡ ನೀರಿಗಾಗಿ ಇಡೀ ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆರೆಯಲ್ಲಿ ಪತ್ತೆಯಾದ ಮೃತದೇಹ ಮೂರ್‍ನಾಲ್ಕು ದಿನಗಳ ಕಾಲ ಕೆರೆಯಲಿದ್ದು, ಮೀನು ಇತರ ಕೀಟಗಳು ದೇಹವನ್ನು ಸಂಪೂರ್ಣ ಕಚ್ಚಿದ್ದವು. ಹೀಗಾಗಿ ಇಂತಹ ನೀರನ್ನು ಕುಡಿಯಲು ಸಾಧ್ಯವಿಲ್ಲ. ಹೀಗಾಗಿ ಕೆರೆಯ ನೀರನ್ನು ಹೊರಕ್ಕೆ ಹರಿಸುವಂತೆ ಗ್ರಾಮಸ್ಥರು ಪಟ್ಟುಹಿಡಿದಿದ್ದರು. ಆದರೆ, ಮುಂದೆ ಮಳೆ ಸಮಸ್ಯೆಯಾದರೆ ಇರುವ ಇತರ ಬಳಕೆ, ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾದರೆ ಮತ್ತೂಂದು ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಗ್ರಾಮಸ್ಥರ ಮನವೋಲಿಸಲು ಪ್ರಯತ್ನ ಪಟ್ಟರಾದರು.

ಮುಂದೆ ಚೆನ್ನಾಗಿ ಮಳೆಯಾಗುತ್ತದೆ ಈ ನೀರನ್ನು ಹೊರ ಹಾಕದೇ ಹೊರತು ನಾವು ಈ ಕೆರೆ ನೀರನ್ನು ಕುಡಿಯಲು ಬಳಸಲ್ಲ. ಅಲ್ಲಿಯವರೆಗೆ ಟ್ಯಾಂಕರ್‌ ನೀರು ಪೂರೈಸಿ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಹೇಳಿದ್ದಾರೆ.

ಕೆರೆಯಲ್ಲಿ ಮೃತದೇಹ ದೊರೆತ ಮಾರನೇ ದಿನವೇ ಕೆರೆ ನೀರಿನ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆದರೆ, ನೀರಿನಲ್ಲಿ ಯಾವುದೇ ಹಾನಿಕಾರಕ ಅಂಶ ಅಥವಾ ಕುಡಿಯಲು ಯೋಗ್ಯವಲ್ಲದ ಬ್ಯಾಕ್ಟಿರಿಯಾಗಳು ಇಲ್ಲ ಎಂದು ಪ್ರಯೋಗಾಲಯ ವರದಿ ಬಂದಿದೆ. ಪುನಃ ಮತ್ತೊಮ್ಮೆ ನೀರು ಪರೀಕ್ಷೆ ಮಾಡಿಸಿದಾಗಲೂ ಅದೇ ಫಲಿತಾಂಶ ಬಂದಿದೆ. ಅಲ್ಲದೆ ವೈಜ್ಞಾನಿಕವಾಗಿ ವೈದ್ಯರು ಹಾಗೂ ತಂತ್ರಜ್ಞರ ಸಮಕ್ಷಮದಲ್ಲಿ ಔಷಧಿ ಸಿಂಪರಣೆ ನಿರ್ವಹಿಸಲಾಗಿದೆ.

 

ಅಧಿಕಾರಿಗಳು ಆ ನೀರನ್ನು ಕುಡಿದು ಧೈರ್ಯ ಹೇಳಿದರೂ ಗ್ರಾಮಸ್ಥರು ಮಾತ್ರ ಬಳಕೆಗೆ ಹಿಂದೇಟು ಹಾಕಿ. ಕಣ್ಣಾರೆ ಕಂಡ ನಂತರ ಅಂತಹ ನೀರು ಕುಡಿಯಲು ಹೇಗೆ ಸಾಧ್ಯ. ಟ್ಯಾಂಕರ್‌ ನೀರು ಒದಗಿಸಿ ಎಂದು ಕೇಳಿಕೊಂಡಿದ್ದರು. ಆದರೆ, ಈಗ ಎರಡು ಕೊಡ ನೀರಿಗಾಗಿ ಇಡೀ ದಿನ ಟ್ಯಾಂಕರ್​ಗಾಗಿ ಕಾಯುವ ಪರಿಸ್ಥಿತಿ ಗ್ರಾಮಸ್ಥರಿಗೆ ಎದುರಾಗಿದೆ. ಪಕ್ಕದ ರೊಟ್ಟಿಗವಾಡ ಗ್ರಾಮಸ್ಥರು ಇದೇ ಕೆರೆಯ ನೀರನ್ನು ಕುಡಿಯಲು ಬಳಸುತ್ತಿದ್ದರು. ಇತ್ತೀಚೆಗೆ ನಡೆದ ಘಟನೆಯಿಂದ ಎರಡೂ ಗ್ರಾಮದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.

ಉಮ್ಮಚಗಿ-ರೊಟ್ಟಿಗವಾಡ ಗ್ರಾಮದ ನಡುವೆ ಒಂದು ಸಣ್ಣ ಕೆರೆಯಿದ್ದು, ಈ ನೀರಿಗಾಗಿ ಇಡೀ ದಿನ ಬಡಿದಾಡುವಂತಾಗಿದೆ. ಬೇಸಿಗೆ ಪರಿಣಾಮ ಅಲ್ಲಿಯೂ ನೀರು ಸಂಪೂರ್ಣ ಬತ್ತಿದ್ದು, ಗಂಟೆಗೆ ಎರಡು ಕೊಡ ನೀರು ದೊರೆಯುವುದೇ ದುಸ್ತರವಾಗಿರುವಾಗ ನೀರಿಗಾಗಿ ಇಡೀ ದಿನ ಕಾಯುವಂತಹ ಪರಿಸ್ಥಿತಿಯನ್ನು ಗ್ರಾಮಸ್ಥರು ತಂದೊಡಿಕೊಂಡಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ