Breaking News

2,000 ನೆರವನ್ನು ಹಿರಿಯರಾದ ಅತ್ತೆಗೆ ಪ್ರಾಧಾನ್ಯ:ಲಕ್ಷ್ಮೀ ಹೆಬ್ಬಾಳಕರ

Spread the love

ಬೆಳಗಾವಿ: ‘ಗೃಹ ಲಕ್ಷ್ಮೀ’ ಯೋಜನೆಯಡಿ ₹ 2,000 ನೆರವನ್ನು ಒಂದು ಮನೆಯಲ್ಲಿ ಅತ್ತೆಗೆ ಕೊಡಬೇಕೋ, ಸೊಸೆಗೆ ಕೊಡಬೇಕೋ ಎಂಬ ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಮನೆಯಲ್ಲಿ ಹಿರಿಯರಾದ ಅತ್ತೆಗೆ ಪ್ರಾಧಾನ್ಯ ಕೊಡಬೇಕಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

 

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಮ್ಮ ಸಂಸ್ಕೃತಿಯಲ್ಲಿ ಅತ್ತೆಯೇ ಮನೆಯ ಯಜಮಾನಿ. ಹಾಗಾಗಿ, ಅತ್ತೆಗೆ ಈ ನೆರವು ಸಿಗಲಿದೆ’ ಎಂದರು.

ಇದಕ್ಕೆ ಧ್ವನಿಗೂಡಿಸಿದ ಸಚಿವ ಸತೀಶ ಜಾರಕಿಹೊಳಿ, ‘ಸ್ವತಃ ಅತ್ತೆಯೇ ಮುಂದೆ ಬಂದು ಸೊಸೆಗೆ ನೆರವು ಕೊಡಲು ಬಯಸಿದರೆ ಮಾತ್ರ ಸೊಸೆಗೆ ಕೊಡುತ್ತೇವೆ’ ಎಂದು ಹೇಳಿದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ