Breaking News
Home / ರಾಜಕೀಯ / ವಿಜಯದಶಮಿ ಬಳಿಕ ಸಿಎಂ ಯಡಿಯೂರಪ್ಪ ಅಖಾಡಕ್ಕೆ!

ವಿಜಯದಶಮಿ ಬಳಿಕ ಸಿಎಂ ಯಡಿಯೂರಪ್ಪ ಅಖಾಡಕ್ಕೆ!

Spread the love

ಬೆಂಗಳೂರು: ವಿಜಯದಶಮಿಯ ಬಳಿಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ.

ಹೌದು. ಸೋಮವಾರದ ಬಳಿಕ ಬೈ ಎಲೆಕ್ಷನ್ ಕುರಿತು ಸಿಎಂ ಕ್ಯಾಂಪೇನ್ ಮಾಡಲಿದ್ದಾರೆ. ಆರ್ ಆರ್ ನಗರವೇ ಯಡಿಯೂರಪ್ಪ ಅವರ ಮೊದಲ ಟಾರ್ಗೆಟ್ ಆಗಿದೆ. ಎರಡು ಕ್ಷೇತ್ರಗಳನ್ನು ಕೂಡ ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಮಾಡಿದ್ದು, ಹೀಗಾಗಿ ರಾಜ್ಯ ಬಿಜೆಪಿ ನಾಯಕರಿಂದ ಮೆಗಾ ಗೇಮ್ ಪ್ಲಾನ್ ನಡೀತಿದೆ. ಎರಡು ಕ್ಷೇತ್ರಗಳ ಮೇಲೆ ಕಣ್ಗಾವಲಿನ ಮೇಲೆ ಕಣ್ಗಾವಲು ಇಡಲಾಗಿದೆ.

ಕಡೆಯ ನಾಲ್ಕು ದಿನ ಸಿಎಂ ಯಡಿಯೂರಪ್ಪರನ್ನ ಪ್ರಚಾರಕ್ಕೆ ಇಳಿಸಲು ಪ್ಲಾನ್ ರೂಪಿಸಲಾಗಿದೆ. ಹೀಗಾಗಿ ರಾಜರಾಜೇಶ್ವರಿನಗರದಲ್ಲಿ 2 ದಿನ ಹಾಗೂ ಶಿರಾದಲ್ಲಿ 2 ದಿನ ಸಿಎಂ ಕ್ಯಾಂಪೇನ್ ಮಾಡಲಿದ್ದಾರೆ. ಆರ್‍ಆರ್ ನಗರದಲ್ಲಿ ವಾರ್ಡ್ ಮಟ್ಟ, ಶಿರಾದಲ್ಲಿ ಹೋಬಳಿ ಮಟ್ಟದಲ್ಲಿ ಪ್ರಚಾರ ನಡೆಸಲಿದ್ದಾರೆ.

ಮಂಗಳವಾರದಿಂದ ಶನಿವಾರದವರೆಗೆ 4 ದಿನ ಬರುವಂತೆ ಬಿಜೆಪಿ ಈಗಾಗಲೇ ಸಿಎಂ ಅವರಿಗೆ ಆಹ್ವಾನ ನೀಡಿದೆ. ಈ ಹಿನ್ನೆಲೆಯಲ್ಲಿ ವಿಜಯದಶಮಿ ಬಳಿಕ ಬರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ