Breaking News

ಗೃಹ ಜ್ಯೋತಿ ಯೋಜನೆ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್.! ಜೂ. 1 ರಿಂದಲೇ ವಿದ್ಯುತ್ ದರ ಹೆಚ್ಚಳ

Spread the love

ಬೆಂಗಳೂರು: ಗೃಹಜ್ಯೋತಿ ಯೋಜನೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ.

ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC ಆದೇಶ ಹೊರಡಿಸಿದೆ.

ಮೇ 12ರಂದು KERC ವಿದ್ಯುತ್ ಪರಿಷ್ಕರಣೆ ಮಾಡಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ವಿದ್ಯುತ್ ದರ ಜೂ. 1 ರಿಂದಲೇ ಜಾರಿಯದಲ್ಲಿದೆ.

ಈ ಹಿಂದೆ ಏಪ್ರಿಲ್ 1 ರಿಂದ ಹೊಸ ದರ ಅನ್ವಯವಾಗಲಿದೆ ಎಂದು KERC ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ದರ ಹೆಚ್ಚಳ ಆದೇಶಕ್ಕೆ ತಡೆ ಬಿದ್ದಿತ್ತು. ಈಗ ಜೂನ್ 1 ರಿಂದ ಪರಿಷ್ಕೃತವನ್ನು ಕೆಇಆರ್‌ಸಿ ಜಾರಿ ಮಾಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ