Breaking News

ಹಳೆಯ ದ್ವೇಷಕ್ಕೆ 200 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು!

Spread the love

ದಾವಣಗೆರೆ: ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಹಳೆಯ ದ್ವೇಷಕ್ಕೆ ತೋಟದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು ನಾಶವಾಗಿವೆ.

ದಾವಣಗೆರೆ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಳೆಯ ದ್ವೇಷವನ್ನೇ ಗುರಿಯಾಗಿಸಿಕೊಂಡ ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ನಾಶಗೊಂಡ ಅಡಿಕೆ ತೋಟವು ರೈತ ಹಾಲೇಶಪ್ಪ ಎಂಬವರಿಗೆ ಸೇರಿದ್ದಾಗಿದ್ದು, ಸುಮಾರು 200 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ.

ಎರಡು ಎಕರೆ ಅಡಿಕೆ ತೋಟ ಮಾಡಿದ್ದ ಹಾಲೇಶಪ್ಪ ಬೆಳೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದರು. ಮೂರು ವರ್ಷದ ಅಡಿಕೆ ಗಿಡಗಳು ದ್ವೇಷಕ್ಕೆ ಬಲಿಯಾಗಿರುವುದು ಹಾಲೇಶಪ್ಪ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಬೆಳೆ ನಾಶದ ಪರಿಹಾರಕ್ಕಾಗಿ ಅವರು ಕಾದುಕುಳಿತಿದ್ದು ಯಾವೊಬ್ಬ ಅಧಿಕಾರಿಯೂ ಅತ್ತ ಸುಳಿಯದೇ ಇರುವುದು ಅವರಲ್ಲಿ ಮತ್ತಷ್ಟು ಬೇಸರ ಮೂಡಿಸಿದೆ. ಈ ಕೃತ್ಯದಿಂದ ಮನ ನೊಂದಿರುವ ರೈತ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ರಾತ್ರೋ ರಾತ್ರಿ 200 ಅಡಿಕೆ ಗಿಡಗಳು ನಾಶ: ರೈತ ಹಾಲೇಶಪ್ಪ ತಮ್ಮ ಜಮೀನಿನಲ್ಲಿ ಎರಡು ವರ್ಷಗಳ ಹಿಂದೆ ಅಡಿಕೆ ಗಿಡಗಳನ್ನು ಹಾಕಿದ್ದರು. ಈಗಾಗಲೇ ಗಿಡಗಳು ಎದೆಯೆತ್ತರಕ್ಕೆ ಬೆಳೆದಿದ್ದವು. ಕಂಡ ಕೆಲ ಕಿಡಿಗೇಡಿಗಳು ಹಳೆಯ ದ್ವೇಷಕ್ಕೆ ಉತ್ತಮ ಫಸಲು ನೀಡಲು ತಯಾರಾಗಿದ್ದ ಅಡಿಕೆ ಗಿಡಗಳನ್ನೇ ರಾತ್ರೋ ರಾತ್ರಿ ಕಡಿದು ಹಾಕಿದ್ದಾರೆ. ಬೆಳಗ್ಗೆ ಹಾಲೇಶಪ್ಪನವರು ಜಮೀನಿಗೆ ಆಗಮಿಸಿದ್ದ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಮಕ್ಕಳಂತೆ ಸಾಕಿದ್ದ ಗಿಡಗಳು ನೆಲಕ್ಕುರುಳಿರುವುದನ್ನು ಕಂಡು ಮಾಲೀಕ ಕಣ್ಣೀರು ಹಾಕಿದ್ದಾರೆ. ಕೂಡಲೇ ಅವರು ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ