Breaking News

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ವಿಶ್ವದ ಗಮನ ಸೆಳೆದ ಕನ್ನಡದ ಶಕ್ತಿ ಕೇಂದ್ರವಾಗಿತ್ತು

Spread the love

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ವಿಶ್ವದ ಗಮನ ಸೆಳೆದ ಕನ್ನಡದ ಶಕ್ತಿ ಕೇಂದ್ರವಾಗಿತ್ತು. ಹೀಗಾಗಿ ಅಫ್ಘಾನಿಸ್ತಾನದಿಂದ ಮರುಳಶಂಕರ ದೇವರು, ಕಾಶ್ಮೀರದಿಂದ ಮೋಳಿಗೆಯ ಮಾರಯ್ಯ ಮೊದಲಾದವರು ಕನ್ನಡ ನಾಡಿನ ಕಲ್ಯಾಣ ನಗರಕ್ಕೆ ಬಂದರು. ಹೀಗೆ ಬಂದ ಮರುಳಶಂಕರ ದೇವರ ಕುರಿತು ಡಾ.ದಯಾನಂದ ನೂಲಿ ಅವರು ಬೃಹತ್ ಕಾದಂಬರಿ ಬರೆದಿರುವುದು ಗಮನಾರ್ಹ ಎಂದು ಡಾ. ಗುರುಪಾದ ಮರಿಗುದ್ದಿ ಅಭಿಪ್ರಾಯ ಪಟ್ಟರು.

ಬೆಳಗಾವಿ ನಾಗನೂರು ಮಠದ ಎಸ್.ಜಿ.ಬಿ.ಐ.ಟಿ ಸಭಾಂಗಣದಲ್ಲಿ ದಿನಾಂಕ 4ರಂದು ಸಂಕೇಶ್ವರದ ಪ್ರಾ. ಬಿ.ಎಸ್. ಗವಿಮಠ ಸಾಹಿತ್ಯ ಪ್ರತಿಷ್ಠಾನ, ಬೆಳಗಾವಿ ಜಿಲ್ಲೆಯ ಲೇಖಕಿಯರ ಸಂಘ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಸಹಯೋಗದಲ್ಲಿ ಜರುಗಿದ ಮರುಳಶಂಕರ ದೇವರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದಡಾ. ಮಾಳಿ ಅವರು ಪುಸ್ತಕದ ವಸ್ತು ವಿವೇಚನೆ ಕುರಿತು ಮಾತನಾಡಿದರು. ಲೇಖಕರಾದ ಡಾ.ದಯಾನಂದ ನೂಲಿ ಅವರು ವೈದ್ಯ ವೃತ್ತಿಯ ಜೊತೆಗೆ ಶರಣ ಸಾಹಿತ್ಯದ ನಿರಂತರ ಅಧ್ಯಯನ ಕಾರಣವಾಗಿ ಇಂತಹ ಬೃಹತ್ ಕಾದಂಬರಿ ರಚಿಸಿದೆ ಎಂದು ಹೇಳಿದರು.
ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮಿಗಳು ಗ್ರಂಥ ಬಿಡುಗಡೆ ಮಾಡಿ, ಡಾ.ನೂಲಿ ಅವರ ಈ ಕೃತಿ ಕಾಳಿದಾಸನ ರಘುವಂಶ, ಮೇಘದೂತ ಮಹಾಕಾವ್ಯಗಳ ಮಾದರಿಯಲ್ಲಿ ರಚನೆ ಆಗಿದೆ. ಭಾರತದ ಭೂಗೋಳ ಮತ್ತು ಇತಿಹಾಸದ ಸಮಗ್ರ ಚಿತ್ರಣ ನೀಡುತ್ತದೆ ಎಂದು ಹೇಳಿದರು.
ನಿಡಸೋಸಿ ದುರದುಂಡೀಶ್ವರಮಠದ ಪೂಜ್ಯ ಶ್ರೀ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮಿಗಳು, ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪಡೆದ ಡಾ.ಎಂ.ವಿ.ಜಾಲಿ ಅವರನ್ನು ಸನ್ಮಾನಿಸಲಾಯಿತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ