Breaking News
Home / ರಾಜಕೀಯ / ಕರುನಾಡಿನಲ್ಲೂ ವಿವಾದಾತ್ಮಕ ಸ್ಟೇಟಸ್ ಪೋಸ್ಟ್: ನಿಪ್ಪಾಣಿಯಲ್ಲಿ ಪ್ರಕರಣ ದಾಖಲು

ಕರುನಾಡಿನಲ್ಲೂ ವಿವಾದಾತ್ಮಕ ಸ್ಟೇಟಸ್ ಪೋಸ್ಟ್: ನಿಪ್ಪಾಣಿಯಲ್ಲಿ ಪ್ರಕರಣ ದಾಖಲು

Spread the love

ಚಿಕ್ಕೋಡಿ : ಕೋಮು ಗಲಭೆಗೆ ಕಾರಣವಾದ ಸ್ಟೇಟಸ್​ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದ ಹಿನ್ನೆಲೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.

ನಗರ ಈಗ ಶಾಂತ ಸ್ಥಿತಿಗೆ ಬರುವಷ್ಟರಲ್ಲಿಯೇ ಆ ವಿವಾದ ಕರ್ನಾಟಕದ ನೆಲಕ್ಕೂ ಕಾಲಿಟ್ಟಿದೆ. ಸದ್ಯಕ್ಕೆ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ.

ನಿಪ್ಪಾಣಿ ನಗರದ ಬಾಲಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಸ್ಟೇಟಸ್ ಪೋಸ್ಟ್​ ಮಾಡಿದ ಹಿನ್ನೆಲೆಯಲ್ಲಿ ನಿಪ್ಪಾಣಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯು ಬಾಲಾಪರಾಧಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಪೊಲೀಸರು ತನಿಖೆ ಕೂಡಾ ಆರಂಭಿಸಿದ್ದಾರೆ.

ಕರ್ನಾಟಕ – ಮಹಾರಾಷ್ಟ್ರ ಗಡಿಯಲ್ಲಿರುವ ನಿಪ್ಪಾಣಿ ನಗರದ 16 ವರೆ ವರ್ಷದ ಬಾಲಕನೊಬ್ಬ ಸ್ಟೇಟಸ್ ಇಡುತ್ತಿದ್ದಂತೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಆತನನ್ನು ಪ್ರಶ್ನಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ.

 

ಇನ್ನೊಂದೆಡೆ, ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ಅವರು ನಗರಕ್ಕೆ ಭೇಟಿ ನೀಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುಬೇಕೆಂದು ಅಲ್ಲಿನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ಹಾಗೂ ಸಮಾಜದ ಸ್ವಾಸ್ತ್ರ್ಯ ಕೆಡಿಸುವಂತಹ ಸ್ಟೇಟಸ್​ಗಳನ್ನು ಯಾರು ಕೂಡ ಇಡಬೇಡಿ ಎಂದು ಕರೆ ನೀಡಿದ್ದಾರೆ. ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ