ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿಯ ಉಪ್ಪಾರವಾಡಿಯಲ್ಲಿ ಪತಿಯೋರ್ವ ಕುಡಿದ ಅಮಲಿನಲ್ಲಿ ಮನೆಯಲ್ಲಿ ಮಲಗಿದ್ದ ಪತ್ನಿಯನ್ನು ಹತ್ಯೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೃತ ಮಹಿಳೆ ಉಪ್ಪರವಾಡಿ ಗಲ್ಲಿಯ ಉಷಾ ಖೋತ (29) ಎಂದು ತಿಳಿದುಬಂದಿದೆ. ಇನ್ನು ಪತಿ ಧರೆಪ್ಪ ಖೋತ ಕೊಲೆಗೈದ ಆರೋಪಿಯಾಗಿದ್ದಾನೆ.
ಮೃತ ಉಷಾ ಮನೆಯ ಕೊಠಡಿಯಲ್ಲಿ ಮಲಗಿದ್ದಾಗ ಪತಿ ಧರೆಪ್ಪ ಖೋತಾ ಚಾಕುವಿನಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.ಬಳಿಕ ತಾನು ಕೂಡ ಅದೇ ಕೊಠಡಿಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.