Breaking News

ಬಡ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ ಮಾಡಿದ ಕೆ ಎಲ್ ರಾಹುಲ್

Spread the love

ಹುಬ್ಬಳ್ಳಿ: ಭಾರತದ ಶ್ರೇಷ್ಠ ಕ್ರಿಕೆಟ್​ ಆಟಗಾರ ಕೆ ಎಲ್ ರಾಹುಲ್​ ಬಡ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ ಮಾಡಿ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮಹಲಿಂಗಪುರದ ಅಮೃತ ಮಾವಿನಕಟ್ಟಿ ಎಂಬ ವಿದ್ಯಾರ್ಥಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಮರ್ಸ್​ ವಿಭಾಗದಲ್ಲಿ 600ಕ್ಕೆ 571 ಅಂಕಗಳನ್ನು ಪಡೆದು ಉತ್ತೀರ್ಣನಾಗಿದ್ದಾರೆ. ಬಡ ಕುಟುಂಬದಿಂದ ಬಂದಿರುವ ಈತ ಹೆಚ್ಚಿನ ವಿದ್ಯಾಭ್ಯಾಸ ನಡೆಸಲು ಆಸಕ್ತಿ ಹೊಂದಿದ್ದ. ಆದರೆ ಕುಟುಂಬದ ಆರ್ಥಿಕ ಪರಿಸ್ಥಿತಿ ಸರಿ ಇರದ ಕಾರಣ ಮುಂದಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ಆರ್ಥಿಕ ಸಹಾಯಕ್ಕಾಗಿ ಮೊರೆಯಿಟ್ಟಿದ್ದರು.

ತಿಳಿದ ನಿತೀನ್​ ಎಂಬುವರು ಮುಂದಿನ ವಿದ್ಯಾಭ್ಯಾಸಕ್ಕಾಗಿ ಈ ವಿದ್ಯಾರ್ಥಿಯನ್ನು ಹುಬ್ಬಳ್ಳಿಯ ಕಾಲೇಜುವೊಂದಕ್ಕೆ ಕರೆದೊಯ್ಯುತ್ತಾರೆ. ಬಿಕಾಂ ಜತೆಗೆ ಸಿಎ ಕೋಚಿಂಗ್ ಅಡ್ಮಿಷನ್​ಗಾಗಿ ಕೇಳುತ್ತಾರೆ. ಇದಕ್ಕೆ ವಾರ್ಷಿಕ 85ಸಾವಿರ ರೂ. ಆಗಲಿದೆ ಎಂದು ಕಾಲೇಜು ಆಡಳಿತ ಮಂಡಳಿಯವರು ಹೇಳುತ್ತಾರೆ. ವಿದ್ಯಾರ್ಥಿ ಒಳ್ಳೆಯ ಮಾರ್ಕ್ಸ್ ಪಡೆದ ಕಾರಣ 10ಸಾವಿರ ರಿಯಾಯಿತಿ ನೀಡಿ 75ಸಾವಿರ ತುಂಬಲು ಹೇಳುತ್ತಾರೆ. ಬಳಿಕ ನಿತೀನ್ ಅವರು ಮಂಜುನಾಥ್ ಹೆಬ​ಸೂರು ಎಂಬುವವರಿಗೆ ಕೆರೆ ಮಾಡಿ ವಿಷಯ ತಿಳಿಸುತ್ತಾರೆ. ಮಂಜುನಾಥ್​ ಅವರು ಈ ವಿಷಯವನ್ನು ತಮ್ಮ ಇಂಜಿನಿಯರ್​ ಸ್ನೇಹಿತ ಅಕ್ಷಯ ಎಂಬುವವರಿಗೆ ತಿಳಿಸುತ್ತಾರೆ. ಅಕ್ಷಯ್​ ಕೂಡಲೇ ಕ್ರಿಕೆಟರ್​ ಕೆಎಲ್​ ರಾಹುಲ್​ ಅವರನ್ನು ಸಂಪರ್ಕಿಸಿ ವಿಷಯ ತಿಳಿಸುತ್ತಾರೆ. ​ಇದನ್ನರಿತ ರಾಹುಲ್​ ಪ್ರತಿಭಾವಂತ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಉಂಟಾಗಬಾರದೆಂದು ಆರ್ಥಿಕ ಸಹಾಯಕ್ಕೆ ಮುಂದಾಗಿದ್ದಾರೆ. ವಿದ್ಯಾರ್ಥಿಯ ಕಾಲೇಜಿನ ಎಲ್ಲ ಶುಲ್ಕವನ್ನು ಭರಿಸುವುದಾಗಿ ಹೇಳಿ ಬ್ಯಾಂಕ್​ ಅಕೌಂಟ್ ಡಿಟೇಲ್ಸ ತೆಗೆದುಕೊಂಡಿದ್ದಾರಂತೆ.

ಬಳಿಕ ಯುವಕನ ಊಟ, ಪುಸ್ತಕ ಕಾಲೇಜು ಶುಲ್ಕ ಸೇರಿ ಎಲ್ಲಾ ಹಣವನ್ನ ​ರಾಹುಲ್ ವಿದ್ಯಾರ್ಥಿಯ ಅಕೌಂಟಗೆ ಜಮೆ ಮಾಡಿದ್ದಾರಂತೆ. ಅಕ್ಷಯ್​ ಎಂಬುವವರು ಕ್ರಿಕೆಟ್ ಆಟಗಾರರಾದ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಕೆಎಲ್ ರಾಹುಲ್ ಸೇರಿದಂತೆ ಇನ್ನೂ ಹಲವರ ಜೊತೆಗೆ ಉತ್ತಮ ಸ್ನೇಹ ಸಂಬಂಧ ಹೊಂದಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮಂಜುನಾಥ್ ಹೆಬಸೂರು ಈಟಿವಿ ಭಾರತ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ಸಹಾಯವನ್ನು ಪಡೆದ ವಿದ್ಯಾರ್ಥಿ ಅಮೃತ ಮಾವಿನಕಟ್ಟಿ ಕೂಡ ಕೆಎಲ್ ರಾಹುಲ್, ಮಂಜುನಾಥ ಹೆಬಸೂರು, ನಿತೀನ್ ಹಾಗೂ ಅಕ್ಷಯ್​ ಅವರ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ