Breaking News
Home / ರಾಜಕೀಯ / Electricity Bill : ಏಪ್ರಿಲ್​ನಿಂದಲೇ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ.. ಜೂನ್ ಬಿಲ್​ನಲ್ಲಿ ಹಿಂಬಾಕಿ ವಸೂಲಿ: ಕೆಇಆರ್​ಸಿ ಸ್ಪಷ್ಟನೆ

Electricity Bill : ಏಪ್ರಿಲ್​ನಿಂದಲೇ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ.. ಜೂನ್ ಬಿಲ್​ನಲ್ಲಿ ಹಿಂಬಾಕಿ ವಸೂಲಿ: ಕೆಇಆರ್​ಸಿ ಸ್ಪಷ್ಟನೆ

Spread the love

ಬೆಂಗಳೂರು: ವಿದ್ಯುತ್‌ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕತ ಶುಲ್ಕವನ್ನು ನಮೂದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಸ್ಪಷ್ಟಪಡಿಸಿದೆ.

ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್​ನಿಂದ ಪೂರ್ವನ್ವಯವಾಗುವುದರಿಂದ ಬಿಲ್‌ನಲ್ಲಿ ಆ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್‌ಗೆ ಪ್ರತಿ ಯೂನಿಟ್ ದರ 4.75 ರೂ ವಿಧಿಸಲಾಗಿದೆ. 100 ಯೂನಿಟ್‌ ಮೀರಿದ್ದಲ್ಲಿ ಬಳಸಿದ ಅಷ್ಟೂ ಯೂನಿಟ್‌ಗೆ 2ನೇ ಶೇಣಿ ದರ ಪ್ರತಿ ಯೂನಿಟ್‌ಗೆ 7 ರೂ. ನಂತೆ ಅನ್ವಯವಾಗಲಿದೆ ಎಂದು ತಿಳಿಸಿದೆ.

ದರ ಪರಿಷ್ಕರಣೆ ಆದೇಶದಲ್ಲಿ ನಿಗದಿತ ಶುಲ್ಕದಲ್ಲಿ 1 ರಿಂದ 50 ಕಿಲೋ ವ್ಯಾಟ್ ವಿದ್ಯುತ್ ಲೋಡ್‌ಗೆ 110 ರೂ ಹಾಗೂ 50 ಕಿಲೋ ವ್ಯಾಟ್‌ ಗಿಂತಲೂ ಮೇಲ್ಪಟ್ಟ ವಿದ್ಯುತ್‌ ಲೋಡ್‌ಗೆ 210 ರೂ ವಿದ್ಯುತ್ ದರ ನಿಗದಿಪಡಿಸಲಾಗಿದೆ ಎಂದು ಹೇಳಿದೆ.

 

ಏಪ್ರಿಲ್ ತಿಂಗಳ ಹೆಚ್ಚಳ ಜೂನ್ ತಿಂಗಳಿನಲ್ಲಿ ವಸೂಲಿ: ಈ ಕುರಿತು ಮಾಹಿತಿ ನೀಡಿರುವ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ 2022ರ ನವೆಂಬರ್‌ನಲ್ಲಿ ವಿದ್ಯುತ್‌ ದರ ಪರಿಷ್ಕರಣೆಗೆ ನೀಡಿದ್ದ ಮನವಿಯನ್ನು ಪುರಸ್ಕರಿಸಿರುವ ಕೆ ಇ ಆರ್ ಸಿ ಆದೇಶದಂತೆ ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ಹೆಚ್ಚಳ ಮಾಡಿದ ಮೊತ್ತವನ್ನು ಜೂನ್ ತಿಂಗಳಿನಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

2 ಶ್ರೇಣಿಯಲ್ಲಿ ದರ ನಿಗದಿ: ಮೊದಲು ಮೂರು ಶ್ರೇಣಿ ದರಗಳಲ್ಲಿ ಸಂಗ್ರಹಿಸಲಾಗುತ್ತಿತ್ತು. ಇದೀಗ ಎರಡು ಶ್ರೇಣಿಯಲ್ಲಿ ಸಂಗ್ರಹಿಸಲು ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ ಎಂದು ತಿಳಿಸಿದ್ದಾರೆ.

ಕೆ ಇ ಆರ್‌ ಸಿ ದರ ಪರಿಷ್ಕರಣೆ ಹೇಗೆ? ಕೆಇಆರ್‌ಸಿ ದರ ನಿಯಂತ್ರಣ ಅಧಿಸೂಚನೆ 2006 ರ ಪ್ರಕಾರ ಎಲ್ಲಾ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್ ಸಿ ಮುಂದೆ ಅರ್ಜಿ ಸಲ್ಲಿಸಬೇಕು.

ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ವರ್ಷ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ದರ ಪರಿಷ್ಕರಣೆ ಆದೇಶವನ್ನು ನೀಡುತ್ತದೆ. ಇದು ಕೆ ಇ ಆರ್ ಸಿಯ ಸಾಮಾನ್ಯ ನಡವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕರಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆ ಇ ಆರ್‌ ಸಿ ಸ್ವಯಂಪ್ರೇರಿತವಾಗಿ ವಿದ್ಯುತ್‌ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶವಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ