Breaking News

ವಿದೇಶಿ ಯೂಟ್ಯೂಬರ್​ಗೆ ಬೆಂಗಳೂರಿನಲ್ಲಿ ಕಿರುಕುಳ ಆರೋಪ; ಆರೋಪಿ ಬಂಧನ

Spread the love

ಬೆಂಗಳೂರು: ಅತಿಥಿ ದೇವೋಭವ ಎಂಬ ಪರಿಕಲ್ಪನೆಯನ್ನ ಅತ್ಯಂತ ಗೌರವದಿಂದ ಆಚರಿಸುವ ದೇಶ ಭಾರತ.

ಭಾರತದ ಯೂಟ್ಯೂಬರ್​ಗಳು ಗಡಿ ದಾಟಿ ವಿಶ್ವದ ಮೂಲೆ ಮೂಲೆ ಪರಿಚಯಿಸುತ್ತಿರುವ ಈ ದಿನಗಳಲ್ಲಿ ಭಾರತೀಯರನ್ನ ಅಲ್ಲಿನ ಜನ ಬರಮಾಡಿಕೊಳ್ಳುವ ರೀತಿಯೂ ಸಹ ಅತಿಥಿ ದೇವೋಭವದ ಪರಿಕಲ್ಪನೆಯನ್ನ ಮತ್ತೊಮ್ಮೆ ನೆನಪಿಸುತ್ತಿದೆ. ಆದರೆ, ಅತಿಥಿ ಸತ್ಕಾರದಲ್ಲಿ ಸದಾ ಮುಂದು ಎನಿಸುವ ನಮ್ಮದೇ ರಾಜ್ಯದ, ರಾಜಧಾನಿ ಬೆಂಗಳೂರಿನಲ್ಲಿ ಇದಕ್ಕೆ ತದ್ವಿರುದ್ಧ ಎನಿಸುವ ಘಟನೆಯೊಂದು ನಡೆದಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರನ್ನ ಸುತ್ತಾಡಲು ಬಂದಿದ್ದ ನೆದರ್ಲೆಂಡ್​ ಮೂಲದ ಖ್ಯಾತ ಯೂಟ್ಯೂಬರ್ ಪೆಡ್ರೋ ಮೋಟಾಗೆ ಸ್ಥಳೀಯನೊಬ್ಬ ಕಿರುಕುಳ ನೀಡಿದ್ದಾರೆ ಎನ್ನಲಾದ ಘಟನೆ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ನಡೆದಿದೆ. ನೆದರ್ಲೆಂಡ್ ಮೂಲದ ಪೆಡ್ರೋ ಕಳೆದ ಎರಡು ತಿಂಗಳಿನಿಂದ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಬೆಂಗಳೂರನ್ನ ಪರಿಚಯಿಸುತ್ತಾ ವ್ಲಾಗ್ ಮಾಡುತ್ತಿರುವಾಗ ತಡೆದ ಸ್ಥಳೀಯರೊಬ್ಬರು ಪೆಡ್ರೋರನ್ನ ರಸ್ತೆಯಲ್ಲಿ ಎಳೆದಾಡಿ, ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ವ್ಯಕ್ತಿಯಿಂದ ಪೆಡ್ರೋ ತಪ್ಪಿಸಿಕೊಂಡ ದೃಶ್ಯಗಳು ಲೈವ್ ರೆಕಾರ್ಡಿಂಗ್​ನಲ್ಲಿ ಸೆರೆಯಾಗಿವೆ‌.

ಘಟನೆಯ ಕುರಿತು ಮುದಾಸಿರ್ ಅಹಮದ್ ಎಂಬುವವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಘಟನೆ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಘಟನೆಯ ಕುರಿತು ಬೆಂಗಳೂರುನಗರ ಪೊಲೀಸರು ರಿ ಟ್ವೀಟ್​ ಮಾಡಿ, ಅಗತ್ಯ ಕ್ರಮಕ್ಕಾಗಿ ನಿಮ್ಮ ಮನವಿಯನ್ನು ಪಶ್ಚಿಮ ವಿಭಾಗದ ಡಿಸಿಪಿಯವರ ಗಮನಕ್ಕೆ ತರಲಾಗಿದೆ ಎಂದು ಬರೆದಿದ್ದಾರೆ.

 

 

ಆರೋಪಿ ಬಂಧನ: ಕಾಟನ್ ಪೇಟೆ ಠಾಣಾ ಪೊಲೀಸರು ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ನವಾಬ್​ ಹಯಾತ್​ ಶರೀಫ್ ಎಂಬಾತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.​


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ