Breaking News

ಹೆಸ್ಕಾಂ ಕಚೇರಿಗೆ ಬೀಗ ಜಡಿದರೈತರು

Spread the love

ವಿದ್ಯುತ್ ದರ ಹೆಚ್ಚಳ ಹಾಗೂ ಸಮರ್ಥವಾಗಿ ವಿದ್ಯುತ್ ಪೋರೈಸುತ್ತಿಲ್ಲ ಎಂದು ಸಿಟ್ಟುಗೆದ್ದ ಅನ್ನದಾತರು ಹೆಸ್ಕಾಂ ಕಚೇರಿಗೆ ಬೀಗ ಜಡಿದ ಘಟನೆ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.

ಹೌದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಹೆಸ್ಕಾಂ ಕಚೇರಿ ದೊಡವಾಡ ಮತ್ತು ನನುಗುಂಡಿಕೊಪ್ಪ, ಚಿಕ್ಕಬೆಳ್ಳಿಕಟ್ಟಿ ಗ್ರಾಮದ ರೈತರು ಪ್ರತಿಭಟನೆ ನಡೆಸಿ ಹೆಸ್ಕಾಂ ಕಚೇರಿಗೆ ಬೀಗ ಹಾಕಿದ್ದಾರೆ.

ಹೆಸ್ಕಾಂ ಅಧಿಕಾರಿಗಳೇ ಕೊಟ್ಟ ಮಾತಿನಂತೆ ವಿದ್ಯುತ್ ಪೂರೈಸುತ್ತಿಲ್ಲ ಅಲ್ಲದೆ ಈಗ ವಿದ್ಯುತ್ ದರವನ್ನು ಸಹ ಹೆಚ್ಚಿಗೆ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.

ಈಗಾಗಲೇ ವಿದ್ಯುತ್ ದರದ ಹೆಚ್ಚಳ ರಾಜ್ಯದೆಲ್ಲಡೆ ತೀವ್ರ ಸ್ವರೂಪ ಪಡೆದಿದ್ದು ಜನರ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದೆ ಅದುಷ್ಟು ಬೇಗ ಸರ್ಕಾರ ವಿದ್ಯುತ್ ದರ ಕಡಿಮೆ ಮಾಡಿ ರೈತರಿಗೆ ಸರಿಯಾಗಿ ವಿದ್ಯುತ್ ಪೋರೈಕೆ ಮಾಡುವ ಮೂಲಕ ಕೃಷಿ ಚಟುವಟಿಕೆಗೆ ಸಹಕಾರ ಒದಗಿಸಬೇಕಾಗಿದೆ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: ಜಯ ಜೋಶಿ

Spread the love ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ