Breaking News
Home / ರಾಜಕೀಯ / ‘ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?’: ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

‘ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?’: ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Spread the love

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳವಾಗಿರುವ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ, ಬಿಕ್ಕಟ್ಟಿಗೆ ಸಿಲುಕಿರುವ ಐಟಿ ಮತ್ತು ಇಎಸ್‌ಡಿಎಂ ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ ಕುಮಾರಸ್ವಾಮಿ ಅವರ ಅಹವಾಲು ಸ್ವೀಕರಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದುಬಾರಿ ವಿದ್ಯುತ್ ದರದಿಂದ ಸಾರ್ವಜನಿಕರ ಜತೆಗೆ ಕೈಗಾರಿಕಾ ವಲಯವೂ ತೀವ್ರ ಸಂಕಷ್ಟಕ್ಕೆ ಸಿಲಿಕಿದ್ದಾರೆ. ಗ್ಯಾರಂಟಿಗಳ ಹೆಸರಿನಲ್ಲಿ ಜನರ ತುಟಿಗೆ ತುಪ್ಪ ಸವರುತ್ತಿರುವ ರಾಜ್ಯ ಸರ್ಕಾರ ವಿದ್ಯುತ್ ಮೇಲಿನ ತೆರಿಗೆಯಲ್ಲಿ ಕೊಂಚ ಕಡಿತ ಮಾಡಲಿ.
ಗೃಹಜ್ಯೋತಿ ಎಂದು ಹೇಳುತ್ತಾ ಎಲ್ಲರ ಮನೆಗಳಲ್ಲಿ ಜ್ಯೋತಿ ಬೆಳಗಿಸುವ ನಾಟಕ ಆಡುತ್ತಿರುವ ಕಾಂಗ್ರೆಸ್ ಸರಕಾರ, ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತದೆ. ಎರಡು ಪಟ್ಟು, ಮೂರು ಪಟ್ಟು ಹೆಚ್ಚು ದರ ವಿಧಿಸಿರುವ ವಿದ್ಯುತ್ ಬಿಲ್ಲುಗಳನ್ನು ನೀಡುತ್ತಿರುವುದು ಗೃಹಜ್ಯೋತಿಯೇ? ಇಲ್ಲ ಸುಡುಜ್ಯೋತಿಯೋ? ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ವಿದ್ಯುತ್ ದರ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಆಟ ಆಡುತ್ತಿವೆ. ಕಾಂಗ್ರೆಸ್ ಸರಕಾರ ನೋಡಿದರೆ, ನಾವು ದರ ಜಾಸ್ತಿ ಮಾಡಿಲ್ಲ. ಹಿಂದೆ ಇದ್ದ ಬಿಜೆಪಿ ಹೆಚ್ಚಳ ಮಾಡಿದ್ದು ಎಂದು ನೆಪ ಹೇಳಿ ಜವಾಬ್ದಾರಿಯಿಂದ ಜಾಣತನದ ಪಲಾಯನ ಮಾಡುತ್ತಿದೆ. ಇವರ ನಾಟಕ ಜನರಿಗೆ ಅರ್ಥ ಆಗುತ್ತಿದೆ ಎಂದು ಹೆಚ್​ಡಿಕೆ ಕಿಡಿಕಾರಿದರು.

 


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ