Breaking News

ಬಿಜೆಪಿ ತಳಪಾಯವೇ ಕುಸಿದು ಹೋಗುತ್ತಿದೆ ಅದನ್ನು ಗಟ್ಟಿ ಮಾಡೋ ಕೆಲಸ ಆಗ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು.

Spread the love

ಬಿಜೆಪಿ ತಳಪಾಯವೇ ಕುಸಿದು ಹೋಗುತ್ತಿದೆ  ಅದನ್ನು ಗಟ್ಟಿ ಮಾಡೋ ಕೆಲಸ ಆಗ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು.

ನಗರದಲ್ಲಿ ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ. ಇದು ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರತ್ತೆ .

ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸತ್ತೆ ಎಂದರು. ನಾನು ಹಿಂದೆ ಹೇಳಿರೋದು ಎಲ್ಲವೂ ನಿಜ ಆಗ್ತಿದೆ ಎಂದ ಕಟೀಲು. ಬಿಜೆಪಿ ಸೋಲಿಗೆ ಕಾರಣ ಯಾರೂ ಅನ್ನೋದನ್ನ ಅವರೇ ಸ್ಪಷ್ಟ ಪಡಿಸಬೇಕಾಗಿದೆ. ಸೋಲಿಗೆ ಹಲವಾರ ಕಾರಣ ಇದೆ ಬಿಜೆಪಿ ಸ್ವಯಂಕೃತ ಅಪರಾಧವೂ ಸೋಲಿಗೆ ಕಾರಣ ಎಂದರು.

ರಾಜ್ಯ ಬಿಜೆಪಿ ಬಹಳ ಗೊಂದಲದಲ್ಲಿದೆ. ವಿಪಕ್ಷ ನಾಯಕ ಯಾರ ಅನ್ನೋದ ಗೊತ್ತಿಲ್ಲ ಪ್ರತಾಪ್ ಸಿಂಹ ಒಂದು ತರಹ ಮಾತಾಡ್ತಾರೆ ಅದು ಬಿಜೆಪಿಗೆ ಬಿಟ್ಟ ವಿಚಾರ.
ಈಗ ಪಕ್ಷ ರಿಪೇರಿ ಮಾಡೋಕೆ ಏನ ಉಳದಿಲ್ಲ ಎಂದರು.

ಇನ್ನು ಶಂಕರ ಪಾಟೀಲ್ ಮುನೇನಕೊಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಗ್ಗೆ ನಮ್ಮ ಜೊತೆ ಏನೂ ಚರ್ಚೆ ಮಾಡಿಲ್ಲ. ಅವರು ಪಕ್ಷಕ್ಕೆ ಬರೋದು ಚರ್ಚೆ ಆಗಿಲ್ಲ. ನಾನು ಅವರೊಂದಿಗೆ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ