Breaking News

ಬಿಎಸ್​​ವೈಗೆ ಹೈಕಮಾಂಡ್ ಬುಲಾವ್

Spread the love

ಬೆಂಗಳೂರು: ನಾಳೆ ಬಿಜೆಪಿ ಶಾಸಕಾಂಗ ಸಭೆ ಇಲ್ಲ. ಯಡಿಯೂರಪ್ಪ ನಾಳೆ ಬೆಳಗ್ಗೆ ದೆಹಲಿಗೆ ಹೋಗಲಿದ್ದು, ಅಲ್ಲೇ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ವಿಪಕ್ಷ ನಾಯಕ ಹೆಸರು ನಾಳೆ ದೆಹಲಿಯಲ್ಲೇ ಘೋಷಣೆಯಾಗಲಿದೆ. ಆ ಮೂಲಕ ದೆಹಲಿಯಲ್ಲೇ ರಾಜ್ಯ ವಿಧಾನಸಭೆ ವಿಪಕ್ಷ ನಾಯಕರ ಗೊಂದಲಕ್ಕೆ ತೆರೆ ಬೀಳಲಿದೆ.‌

ಹೈಕಮಾಂಡ್ ಬುಲಾವ್ ಹಿನ್ನಲೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಅಲ್ಲೇ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ‌ನಾಳೆಯೇ ವಿಪಕ್ಷ ನಾಯಕನ ಹೆಸರು ಘೋಷಣೆಯಾಗಲಿದೆ. ವಿಪ್ ಆಯ್ಕೆಯೂ ಕೂಡ ನಾಳೆ ಆಗಲಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಧಾನ್ ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕನ ಸಂಬಂಧ ಪಕ್ಷದ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅವರು ಸಂಗ್ರಹಿಸಿರುವ ಅಭಿಪ್ರಾಯವನ್ನು ಬಿಜೆಪಿ ವರಿಷ್ಠರಿಗೆ ಸಲ್ಲಿಸಿದ್ದಾರೆ.

ವಿಪಕ್ಷ ನಾಯಕ ಸ್ಥಾನಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಬಸನಗೌಡ ಯತ್ನಾಳ್, ಆರ್.ಅಶೋಕ್, ಅಶ್ವತ್ಥ್ ನಾರಾಯಣ್, ಸುನೀಲ್ ಕುಮಾರ್, ಸುರೇಶ್ ಕುಮಾರ್ ರೇಸ್ ನಲ್ಲಿದ್ದಾರೆ. ಭಾನುವಾರ ವಿಪಕ್ಷ ನಾಯಕನ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನ ಸ್ವಾಗತಿಸಿದ ಬಿಜೆಪಿ ನಾಯಕರು

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ.‌ ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.‌ ಈ ಸಂಬಂಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ