Home / ರಾಜಕೀಯ / ಈ ವರ್ಷದ ಬಜೆಟ್​ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ

ಈ ವರ್ಷದ ಬಜೆಟ್​ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ.

ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ ಮಹಾಸಂಸ್ಥಾನಕ್ಕೆ ನಾಂದಿ ಹಾಡಲಾಯಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನಿಧ್ಯದಲ್ಲಿ ಯಶಸ್ವಿಯಾಗಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿರುವ ಪೀಠ, ಈಗ ನಿರಂಜನಾನಂದಪುರಿ ಶ್ರೀಗಳ ಸಾನಿಧ್ಯದಲ್ಲಿ ಸಮಾಜಮುಖಿಯಾಗಿ ನಡೆಯುತ್ತಿದೆ ಎಂದರು.

ನಾವು ಚುನಾವಣೆ ವೇಳೆ ನೀಡಿರುವ ಐದೂ ಗ್ಯಾರಂಟಿಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡುತ್ತೇವೆ. ಯಾರೇ ಆಡಿಕೊಂಡರೂ ಈ ವರ್ಷದ ಬಜೆಟ್ ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ. ನಮ್ಮ ಐದೂ ಘೋಷಣೆಗಳು ಜಾತಿ-ಧರ್ಮ ಮೀರಿದವುಗಳು. ಸರ್ವ ಜನಾಂಗದ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಇವರ ಸಂಕಷ್ಟ ನಿವಾರಣೆಗೆ ಈ ಐದು ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದು ಹೇಳಿದರು.

ನಾನು ಅಧಿಕಾರದಲ್ಲಿ ಇರುವವರೆಗೂ ಶೋಷಿತ ಜಾತಿಗಳಿಗೆ, ದಲಿತ ಸಮುದಾಯಗಳಿಗೆ, ಅಲ್ಪ ಸಂಖ್ಯಾತ ಸಮುದಾಯಗಳ ಹಾಗೂ ಎಲ್ಲಾ ಜಾತಿಯ ಬಡವರ ಏಳಿಗೆಗೆ ಶ್ರಮಿಸುತ್ತೇನೆ. ಹೋರಾಟ ಮಾಡಿಯೇ ಮಾಡುತ್ತೇನೆ ಎಂದು ಭರವಸೆ ನೀಡಿದ ಸಿಎಂ, ನಾನು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಕೊನೆಯವರೆಗೂ ರಾಜಕಾರಣದಲ್ಲಿ ಕ್ರಿಯಾಶೀಲವಾಗಿರುತ್ತೇನೆ. ಬಡವರ ಪರ ರಾಜಕಾರಣ, ಹೋರಾಟ ಮುಂದುವರೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.

ಸರ್ಕಾರದ ಅನುದಾನ ಬೇಡ, ಸಮಾಜದ ಬೆವರು ಸಾಕು: ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ತಮ್ಮ ಆಶೀರ್ವಚನದಲ್ಲಿ, ಶಾಖಾ ಮಠದ ನಿರ್ಮಾಣಕ್ಕೆ ನಾವು ಸರ್ಕಾರದ ಅನುದಾನ ಕೇಳುವುದಿಲ್ಲ, ಸಮಾಜದ ಬೆವರು ಮತ್ತು ಶ್ರಮ ಸಾಕು ಎಂದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್ ಅವರು ಶ್ರೀಮಠದ ನಿರ್ಮಾಣಕ್ಕೆ ವೈಯುಕ್ತಿಕವಾಗಿ 50 ಲಕ್ಷ ರೂ.ಗಳ ಅನುದಾನ ನೀಡುವುದಾಗಿ ಘೋಷಿಸಿದರು. ಬಳಿಕ ಹಲವರು ತಮ್ಮ ತಮ್ಮ ಶಕ್ತಿಯನುಸಾರ 50 ಸಾವಿರ ರೂಪಾಯಿಯಿಂದ 25 ಲಕ್ಷ ರೂಪಾಯಿವರೆಗೂ ತಮ್ಮ ನೆರವನ್ನು ಘೋಷಿಸಿದರು.

ಸಿದ್ದರಾಮಯ್ಯರ ಸರ್ಕಾರದ ಅನುದಾನದಲ್ಲಿ ನಾನು ಮತ್ತೆ ಶಾಸಕನಾದೆ: ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಮಾತನಾಡಿ, 2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರ ಶಿಷ್ಯನಾಗಿ, ಅಭಿಮಾನಿಯಾಗಿ ಶಾಖಾಮಠದ ನಿರ್ಮಾಣಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ನೀಡುತ್ತೇನೆ ಎಂದು ಹೇಳಿದರು.

ಇನ್ನು, ಕಾರ್ಯಕ್ರಮದಲ್ಲಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು, ಶಾಖಾ ಮಠದ ಪೂಜ್ಯರುಗಳಾದ ಈಶ್ವರಾನಂದಪುರಿ ಮಹಾಸ್ವಾಮೀಜಿ, ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ, ಶಿವಾನಂದಪುರಿ ಮಹಾಸ್ವಾಮೀಜಿ, ತ್ರಿದಂಡಿ ವೆಂಕಟರಾಮಾನುಜ ಮಹಾಸ್ವಾಮೀಜಿ, ಸಮಾಜದ ಮುಖಂಡರಾದ ಹೆಚ್.ವಿಶ್ವನಾಥ್, ಸಚಿವರಾದ ಬೈರತಿ ಸುರೇಶ್, ಮಾಜಿ ಸಚಿವರಾದ ಹೆಚ್. ಎಂ. ರೇವಣ್ಣ, ಕೆ. ಎಸ್. ಈಶ್ವರಪ್ಪ, ಬಂಡೆಪ್ಪ ಕಾಶೆಂಪುರ್, ಕೊಪ್ಪಳ ವಿವಿ ಕುಪಪತಿಗಳಾದ ಬಿ. ಕೆ. ರವಿ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ