Breaking News

ಇಂದಿನಿಂದ 10 ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ

Spread the love

ಬೆಂಗಳೂರು: ಇಂದಿನಿಂದ ಅಂದರೇ ಜುಲೈ 3 ರಿಂದ 10 ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ.‌ ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಹೊಸ ಕಾಂಗ್ರೆಸ್ ಸರ್ಕಾರದ ಮುನ್ನೋಟವನ್ನು ಮುಂದಿಡಲಿದ್ದಾರೆ.

ಮಂಗಳವಾರದಿಂದ ಉಭಯ ಸದನ ಆಡಳಿತಾರೂಢ ಹಾಗೂ ಪ್ರತಿಪಕ್ಷಗಳ ನಡುವಿನ ಸದನ ಕದನಕ್ಕೆ ಸಾಕ್ಷಿಯಾಗಲಿದೆ.

10 ದಿನಗಳ ಕಾಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ನಡೆಯಲಿದ್ದು, ಇಂದು ಜಂಟಿ ಅಧಿವೇಶನ ಉದ್ದೇಶಿಸಿ ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಜು.7ಕ್ಕೆ ಸಿಎಂ‌ ಸಿದ್ದರಾಮಯ್ಯ ಹೊಸ ಬಜೆಟ್ ಮಂಡನೆ ಮಾಡಲಿದ್ದಾರೆ.‌ ಸೋಮವಾರದಿಂದ ಆರಂಭವಾಗಲಿರುವ ಹೊಸ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಅನೇಕ ಸದನ ಕುತೂಹಲಕ್ಕೆ ಕಾರಣವಾಗಿದೆ


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ