Breaking News

ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಹದೇವಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ, ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಎಂಬುವವರನ್ನು ಬಂಧಿಸಿದ್ದಾರೆ. ಪೈ ಲೇಔಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಂಧಿತರು ಶ್ರೀಮಂತರನ್ನು ಟಾರ್ಗೇಟ್ ಮಾಡಿ, ಪೈ ಲೇಔಟ್ ಗೆ ಕರೆತರುತ್ತಿದರು. ಅಲ್ಲಿಗೆ ಬಂದ ಬಳಿಕ ವ್ಯಕ್ತಿ ಯುವತಿ ಜೊತೆ ಇದ್ದಾಗ ಯುವತಿಯ ಪತಿ ಹಾಗೂ ಸ್ನೇಹಿತರೆಂದು ದಾಳಿ ಮಾಡಿ ವಿಡಿಯೋ ಚಿತ್ರಣ ಮಾಡುತ್ತಿದ್ದರು.

ಹೀಗೆ ವಿಡಿಯೋ ಮಾಡಿದ ಬಳಿಕ ವ್ಯಕ್ತಿಗೆ ವಿಷಯ ಹೊರಗೆ ಗೊತ್ತಾದರೆ ವಿಡಿಯೋ ಬಿಡುಗಡೆ ಮಾಡುತ್ತೇವೆ ಹಾಗೂ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿ, ಹಣ, ಚಿನ್ನಾಭರಣಗಳನ್ನು ಕಿತ್ತುಕೊಳ್ಳುತ್ತಿದ್ದರು. ವ್ಯಕ್ತಿಯೊಬ್ಬ ನೀಡಿದ ದೂರಿನ ಮೇರೆಗೆ ಇದೀಗ ಮಹದೇವಪುರ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ