Breaking News

ಸ್ಕೂಟರ್​ಗೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವು,

Spread the love

ಸ್ಕೂಟರ್​​ಗೆ ಬಸ್ ಡಿಕ್ಕಿ; ವಿದ್ಯಾರ್ಥಿನಿ ಸಾವು: ಸ್ಕೂಟರ್​ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಪೀಣ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ದಿಶಾ ಸಾವನ್ನಪ್ಪಿದರೆ, ತಂದೆ ಸುರೇಶ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲ್ಲೇಶ್ವರದ ಎಂಇಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪಿಸಿಎಂ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ದಿಶಾ, ಕಾಲೇಜಿಗೆ ಹೋಗುವ ಸಲುವಾಗಿ ನಾಗಸಂದ್ರದಿಂದ ತಂದೆ ಜೊತೆ ಸ್ಕೂಟರ್​​ನಲ್ಲಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಜಾಲಹಳ್ಳಿ ಕ್ರಾಸ್ ಬಳಿ ಬರುತ್ತಿದ್ದರು. ಧರ್ಮಸ್ಥಳದಿಂದ ನಗರದ ಕಡೆಗೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ತಂದೆ-ಮಗಳು ಕೆಳಗೆ ಬಿದ್ದಿದ್ದಾರೆ. ಅಪಘಾತದಲ್ಲಿ ದಿಶಾ ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ದಿಶಾ ಮೃತಪಟ್ಟಿದ್ದಾರೆ. ಅದೃಷ್ಣವಶಾತ್ ತಂದೆ ಬಚಾವ್ ಆಗಿದ್ದಾರೆ. ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ