Breaking News

ಡೆಲಿವರಿ ಬಾಯ್ಸ್‌ಗೆ ಬಿಗ್‌ ರಿಲೀಫ್! 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗೊ ಘೋಷಿಸಿದೆ.

Spread the love

ಸಿಎಂ ಸಿದ್ದರಾಮಯ್ಯ (CM Siddaramaiah) ಅವರು 14ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್‌ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿಯ ಬಜೆಟ್‌ ಕೂತುಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96 ರಲ್ಲಿ ಮಂಡಿಸಿದ ಮೊದಲ ಬಾರಿಗೆ ಬಜೆಟ್‌ ಮಂಡಿಸಿದ್ದರು.
ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಬಜೆಟ್‌ ಆರಂಭದಲ್ಲೇ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವುದನ್ನು ತಿಳಿಸಿದರು. ಆದರೆ ಹೊಟ್ಟೆಪಾಡಿಗಾಗಿ ಡೆಲಿವರಿ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವವರಿಗೆ ಸಿಎಂ ಸಿದ್ದು ಬಿಗ್‌ ರಿಲೀಫ್‌ ಕೊಟ್ಟಿದ್ದಾರೆ.

ಡೆಲಿವರಿ ಬಾಯ್ಸ್‌ಗೆ ಬಿಗ್‌ ರಿಲೀಫ್!

Swiggy, zomato ಮತ್ತು Amazon ನಂತಹ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ ಸರ್ಕಾರವು 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗಿ ಘೋಷಣೆ ಮಾಡಿದೆ.

ಅಪಘಾತ ವಿಮೆ ಕೊಡುವುದಾಗಿ ಘೋಷಣೆ!

ಹೊಟ್ಟೆ ಪಾಡಿಗೆ ದಿನವಿಡೀ ಕಷ್ಟ ಪಟ್ಟು ದುಡಿಯುತ್ತಿರುವ ವರ್ಗ ಅಂದ್ರೆ ಅದು ಡೆಲಿವರಿ ಮಾಡುವ ಕೆಲಸಗಾರರು ಅಂದರೆ ತಪ್ಪಾಗಲ್ಲ. ಅದರಲ್ಲೂ ಈ ಸ್ವಿಗ್ಗಿ, ಜೊಮ್ಯಾಟೋದಲ್ಲಿ ಎಷ್ಟು ಗಂಟೆಗೆ ಆರ್ಡರ್‌ ಮಾಡಿದ್ರೂ ನಿಮ್ಮ ಮನೆ ಬಾಗಿಲಿಗೆ ಬಿಸಿ ಬಿಸಿ ಆಹಾರವನ್ನು ತಂದು ಕೊಡುವವರು ಡೆಲಿವರಿ ಬಾಯ್ಸ್.

ಇತ್ತೀಚೆಗೆ ರಾತ್ರಿ ಸಮಯದಲ್ಲಿ ಡೆಲಿವರಿ ಬಾಯ್ಸ್‌ ಡೆಲಿವರಿ ಮಾಡುವಾಗ ಅಪಘಾತವಾಗಿರುವ ಘಟನೆಗಳು ಹೆಚ್ಚಾಗುತ್ತಲೇ ಇದೆ. ಮೊನ್ನೆಯಷ್ಟೇ ಮೈಸೂರು ರಸ್ತೆಯಲ್ಲಿ ಡೆಲಿವರಿ ಏಜೆಂಟ್‌ಗೆ ಕಾರು ಗುದ್ದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಇದನ್ನೆಲ್ಲಾ ಪರಿಗಣಿಸಿರುವ ಸರ್ಕಾರ 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗೊ ಘೋಷಿಸಿದೆ.

ಕೇವಲ ಸ್ವಿಗ್ಗಿ, ಜೊಮ್ಯಾಟೋ ಅಷ್ಟೇ ಅಲ್ಲದೇ ಈ ಕಾಮರ್ಸ್ ಸಂಸ್ಥೆಗಳ ಡೆಲಿವರಿ ಬಾಯ್ಸ್‌ಗೆ 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ.


Spread the love

About Laxminews 24x7

Check Also

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Spread the loveಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ  ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ