Breaking News

ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ: ಪ್ರಹ್ಲಾದ್ ಜೋಶಿ

Spread the love

ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್​ದಲ್ಲಿ ಆಸ್ತಿ, ಮದ್ಯ ತೆರಿಗೆ ಹೆಚ್ಚಳ ಮಾಡಿದ್ದಾರೆ. ಶೇ 10ರಷ್ಟು ತೆರಿಗೆ ಹೆಚ್ಚಿಸಿದ್ದಾರೆ. ಮತ್ತೆ ಯಾವ ಯಾವ ತೆರಿಗೆ ಹೆಚ್ಚಳ ಮಾಡ್ತಾರೆ ನೋಡೋಣ ಎಂದು ರಾಜ್ಯದ ಸರ್ಕಾರದ ಬಜೆಟ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ.

ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಯಾವುದೇ ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ ಆಗುತ್ತಿದೆ. ಬಜೆಟ್ ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣುತ್ತಿದೆ. ಪದೇ ಪದೆ ಭಾರತ ಸರ್ಕಾರದ ಮೇಲೆ ಮಂತ್ರಿಗಳು ಸಚಿವರು ಆರೋಪ ಮಾಡ್ತಿದ್ದಾರೆ. ಜುಲೈ 1ಕ್ಕೆ ನೀಡಿರುವ ಅಕ್ಕಿಯೂ ಕೇಂದ್ರ ಸರ್ಕಾರದ್ದು, ಕರ್ನಾಟಕ ಸೇರಿ 80 ಕೋಟಿ ಜನರಿಗೆ ಅಕ್ಕಿ ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ