Breaking News

ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ

Spread the love

ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು.

ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು.

ಇನ್ನೂ,. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ 14 ರೂಪಾಯಿಯಷ್ಟು ಕಡಿಮೆ ಇದೆ ಹಾಲಿನ ದರ ಹೆಚ್ಚಳ ಮಾಡಿದ ಕಾರಣ ರೈತರು ಜಿಲ್ಲಾ ಒಕ್ಕೂಟಗಳಿಗೆ ಹಾಲು ಕೊಡಲು ಹಿಂದೇಟು ಹಾಕುತ್ತಿದ್ದು, ಇದರಿಂದ ಪ್ರತಿದಿನ 8 ಲಕ್ಷ ಲೀಟರ್ ನಷ್ಟು ಹಾಲು ಖಾಸಗಿಯವರ ಪಾಲಾಗುತ್ತದೆ ಎಂಬ ಮಾಹಿತಿಯನ್ನು ಸಿಎಂ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ