ದಾವಣಗೆರೆ: ಸಿಎಂ ಸಿದ್ದರಾಮಯ್ಯನವರು ಕೂಡು ಕೃಷಿ ಕಾಯ್ದೆ ವಾಪಸ್ ಪಡೆಯಲು ಚರ್ಚೆ ಮಾಡಿದ್ದರು.
ಅವರ ಚುನಾವಣ ಪ್ರಣಾಳಿಕೆಯಲ್ಲೂ ಹಿಂಪಡೆಯುವ ಬಗ್ಗೆ ಘೋಷಣೆ ಮಾಡಲಾಗಿತ್ತು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆ ಹಾಗು ಭೂಸುಧಾರಣಾ ಕಾಯ್ದೆ ಅತ್ಯಂತ ಅಪಾಯಕಾರಿ. ಅದನ್ನು ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯನವರು ಏಕೆ ಸದನದಲ್ಲಿ ಮುಂದಾಗಲಿಲ್ಲ, ರದ್ದುಪಡಿಸಲು ಈಗಾಗಲೇ ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ ಎಂದರು.
ತಕ್ಷಣ ವಾಪಸ್ ಪಡೆಯಬೇಕೆಂಬ ಬೇಡಿಕೆ ಇಟ್ಟಿದ್ದೇವೆ. 1961 ಭೂಸುಧಾರಣಾ ಕಾಯ್ದೆ ಏನಿದೆಯೋ ಇದಕ್ಕೆ ವಿಚಾರ ನಿಬಂಧನೆಗಳನ್ನು ಇಟ್ಟು ಅಂದು ಮುಂದುವರೆಸಿದ್ದರು. ವಾಪಸ್ ಪಡೆಯಲು ಸಿದ್ದರಾಮಯ್ಯನವರು ಪ್ರಯತ್ನಪಡಬೇಕು. ಇದು ವ್ಯಾಪಾರೀಕರಣ ಆಗಬಾರದು. ಕೃಷಿ ಭೂಮಿ ಕೃಷಿ ಭೂಮಿಯಾಗಿರಬೇಕು, ಮುಖ್ಯಮಂತ್ರಿಗಳು ಜರೂರ್ ಆಗಿ ಕಾಯ್ದೆಗಳನ್ನು ರದ್ದು ಮಾಡಿ ಆದೇಶ ಹೊರಡಿಸುತ್ತಾರೆಂದು ನಂಬಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಈ ಕಾಯ್ದೆಗಳನ್ನು ರದ್ದು ಪಡಿಸಲು ಪರಿಶೀಲನೆ ಮಾಡ್ತಿದ್ದೇವೆ ಎಂದು ಸಿಎಂ ಹೇಳಿದ್ದರು. ಆದರೆ ಪರಿಶೀಲನೆ ಎಂಬ ಪದ ಕೈಬಿಟ್ಟು ಮೋದಿಯವರು ಹೇಗೆ ಯಾರಿಗೆ ಹೇಳದೆ, ಕೇಳದೆ ಕಾಯ್ದೆಗಳನ್ನು ಜಾರಿಗೆ ತಂದರೋ ಹಾಗೇ ಈ ಕಾಯ್ದೆಗಳನ್ನು ರದ್ದುಪಡಿಸಿ ಎಂದು ಒತ್ತಾಯಿಸಿದರು.