Home / ರಾಜಕೀಯ / ಸಾಲ ಮಾಡಿ ಅದನ್ನು ತೀರಿಸಲಾಗದೇ ನೇಣು ಹಾಕಿಕೊಂಡು ರೈತನ ಆತ್ಮಹತ್ಯೆ

ಸಾಲ ಮಾಡಿ ಅದನ್ನು ತೀರಿಸಲಾಗದೇ ನೇಣು ಹಾಕಿಕೊಂಡು ರೈತನ ಆತ್ಮಹತ್ಯೆ

Spread the love

ಕೃಷಿ ಚಟುವಟಿಕೆಗಾಗಿ ಸಾಲ ಮಾಡಿ ಅದನ್ನು ತೀರಿಸಲಾಗದೇ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಇರುವ ಸೈಬನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಉಪ್ಪಿನ ಬೆಟಗೇರಿ ಗ್ರಾಮದ ಕಲ್ಲಪ್ಪ ಕುರಗುಂದ (55) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು.ಕೃಷಿ ಚಟುವಟಿಕೆಗಾಗಿ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದ.

ಅಲ್ಲದೇ ತನಗಿದ್ದ ಜಮೀನನ್ನು 7 ಲಕ್ಷ ರೂಪಾಯಿಗೆ ಲೀಸ್‌ನಲ್ಲಿ ಹಾಕಿಕೊಂಡಿದ್ದ. ಮಳೆಯಾಗದ ಕಾರಣ ಕೃಷಿ ಸಾಲ ತೀರಿಸಲಾಗದೇ ಹಾಗೂ ಲೀಸ್‌ನಲ್ಲಿದ್ದ ಹೊಲವನ್ನು ಬಿಡಿಸಿಕೊಳ್ಳಲಾಗದೇ ಕಲ್ಲಪ್ಪ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ