Breaking News

ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

Spread the love

ಹಾವೇರಿ: ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರೈತರನ್ನ ಮನೆಹಾಳರನ್ನಾಗಿ ಮಾಡುವ ಕಾನೂನು ಇದ್ದರೇನು? ಬಿಟ್ಟರೇನು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿಯ ಗೋ ಹತ್ಯೆ ನಿಷೇಧ ಕಾನೂನು ಮಾಡುವ ಸರ್ಕಾರಗಳಿಗೆ, ವ್ಯಕ್ತಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು. ಯಾವ ಹಸು ಗೋಶಾಲೆಗೆ ಹೋಗಬೇಕು, ಯಾವ ಹಸು ಕಸಾಯಿಖಾನೆಗೆ ಹೋಗಬೇಕು ಎನ್ನುವ ಕುರಿತಂತೆ ತಿಳಿವಳಿಕೆ ಇರಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಎಂಬುವ ಪದ ಬಹಳ ಭಾವನಾತ್ಮಕವಾದುದು. ಇದನ್ನ ಬ್ಲಾಕ್ ಮೇಲ್ ಎಂತಲೂ ಕರೆಯುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ