Breaking News

‘ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ”: ಶುಭಕೋರಿದ ಸಿಎಂ

Spread the love

ಬೆಂಗಳೂರು: ”ಚಂದ್ರಯಾನ-3ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲಿಗಲ್ಲನ್ನು ಇಸ್ರೋ ಸಾಧಿಸಿದೆ” ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಹರ್ಷ ವ್ಯಕ್ತಪಡಿಸಿದರು.

 

ಚಂದ್ರಯಾನ-3ರ ಉಡಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ”ನಿರಂತರ ಹೊಸ ಆವಿಷ್ಕಾರಗಳು ಮತ್ತು ಸಂಶೋಧನೆಯ ಮೂಲಕ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತ ದೇಶ ವಿಶ್ವದಲ್ಲೇ ಮುಂಚೂಣಿ ಸ್ಥಾನ ಹೊಂದುವಲ್ಲಿ ಇಸ್ರೋ ಕೊಡುಗೆ ಅಪಾರ. ಚಂದ್ರಯಾನ -1 ಮತ್ತು 2ರ ಯಶಸ್ವಿ ಕಾರ್ಯಾಚರಣೆಗಳಿಂದ ಇಸ್ರೋ ಸಂಸ್ಥೆ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಕನಸು ಕಾಣಲು ಅನುವು ಮಾಡಿಕೊಟ್ಟಿದೆ. ಇಂದಿನ ಈ ಯಶಸ್ವಿ ಕಾರ್ಯಾಚರಣೆ ವಿಶ್ವದ ಚಂದ್ರನ ಅನ್ವೇಷಣೆಯ ಕ್ಷೇತ್ರದಲ್ಲಿ ವಿಶೇಷ ಮೈಲಿಗಲ್ಲನ್ನು ಸಾಧಿಸಿದೆ” ಎಂದಿದ್ದಾರೆ.

 ಸಿಎಂ ಟ್ವೀಟ್ ಮೂಲಕ ಸಂತಸ”ಮುಂದಿನ ದಿನಗಳಲ್ಲಿ ಚಂದ್ರನ ಮಣ್ಣಿನ ಮಾದರಿಗಳನ್ನು ಸಮರ್ಥವಾಗಿ ಮರಳಿ ತರುವ ಮೂಲಕ, ಚಂದ್ರನ ಮೇಲ್ಮೈನ ನಮ್ಮ ತಿಳಿವಳಿಕೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲು ಅನುವು ಮಾಡಿ ಕೊಡಲಿದೆ” ಎಂದು ತಿಳಿಸಿದ್ದಾರೆ. ”ಚಂದ್ರಯಾನ- 3ರ ಯಶಸ್ಸನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಇಸ್ರೋ ವಿಜ್ಞಾನಿಗಳು ಕೈಗೊಂಡ ತಾಂತ್ರಿಕ ಪ್ರಗತಿ ಮತ್ತು ಅಂತಾರಾಷ್ಟ್ರೀಯ ಸಹಯೋಗಗಳು ಶ್ಲಾಘನೀಯ. ಇಂತಹ ಬದ್ಧತೆ ಮತ್ತು ನಿರಂತರ ಸಾಧನೆ ಭಾರತ ದೇಶವನ್ನು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದುಕೊಳ್ಳಲು ಅನುವು ಮಾಡಿದೆ” ಎಂದು ಹರ್ಷ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ