ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋದು ಜನರ ಮತ್ತು ನನ್ನ ವೈಯಕ್ತಿಯ ಅಭಿಪ್ರಾಯ. ಇದು ಪಕ್ಷ ವಿರೋಧಿ ಹೇಳಿಕೆಯಾಗಲ್ಲ ಎಂದು ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. ಪರ ಪ್ರಚಾರ ನಡೆಸಿದ ಜಮೀರ್ ಅಹ್ಮದ್ ಮಾಧ್ಯಮಗಳ ಜೊತೆ ಮಾತನಾಡಿದರು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗಲ್ಲ. ಆದರೆ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನ ನಿರ್ಧರಿಸುತ್ತದೆ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸುತ್ತೇನೆ ಎಂದರು.