Home / ಜಿಲ್ಲೆ / ಬೆಳಗಾವಿ / ಸ್ನೇಹಿತನನ್ನು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನೇಹಿತನನ್ನು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ಇಲ್ಲಿನ ಪೀರನವಾಡಿಯ ಯುವಕ ಅರ್ಬಾಜ್ ರಫೀಕ್ ಮುಲ್ಲಾ(22) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೀರನವಾಡಿ ಗ್ರಾಮದ ಪ್ರಸಾದ ನಾಗೇಶ ವಡ್ಡರ, ಪ್ರಶಾಂತ ಕರ್ಲೇಕರ್ ಬಂಧಿತ ಆರೋಪಿಗಳು. ಇನ್ನು ಕೊಲೆಗೆ ಹಳೆ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ.

ಆರೋಪಿಗಳಾದ ಪ್ರಸಾದ ವಡ್ಡರ, ಪ್ರಶಾಂತ ಕರ್ಲೇಕರ್ ಮತ್ತು ಕೊಲೆಯಾದ ಅರ್ಬಾಜ್ ಮುಲ್ಲಾ ಮೂವರು ಸ್ನೇಹಿತರು. ಮೂರು ವರ್ಷಗಳ ಹಿಂದೆ ಪೀರನವಾಡಿಯ ಜನ್ನತ್ ನಗರದಲ್ಲಿ ಅರ್ಬಾಜ್​ ವಾಸವಿದ್ದ. ಈ ಮನೆ ಪಕ್ಕ ಒಂದು ಪೆಟ್ಟಿಗೆ ಅಂಗಡಿ ಇತ್ತು. ಆಗ ಪ್ರತಿದಿನದಂತೆ ಅಂಗಡಿಗೆ ಬಂದ ಆರೋಪಿ ಪ್ರಸಾದ್ ಗುಟ್ಕಾ ತಿಂದು ಅರ್ಬಾಜ್ ಮನೆ ಗೋಡೆಗೆ ಉಗುಳಿದ್ದಾನೆ. ಈ ವೇಳೆ, ನೋಡಿಕೊಂಡು ಉಗುಳು ಎಂದು ಪ್ರಸಾದ್​ಗೆ ಅರ್ಬಾಜ್ ಹೇಳಿದ್ದಾನೆ. ಹೀಗೆ ಮಾತಿಗೆ ಮಾತು ಬೆಳೆದು ಇಬ್ಬರಿಗೂ ವಾಗ್ವಾದವಾಗಿದೆ. ಅಲ್ಲದೇ ಅದೇ ಸಂದರ್ಭದಲ್ಲಿ ಅರ್ಬಾಜ್ ಪ್ರಸಾದನಿಗೆ ನಿನ್ನ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದನು.

ಅದಾದ ಬಳಿಕ‌ ಮೂರು ವರ್ಷಗಳ ನಂತರ ಅರ್ಬಾಜ್ ಜನ್ನತ್ತ ನಗರದಿಂದ ಹೈದರ್ ಅಲಿ ನಗರಕ್ಕೆ ತನ್ನ ಮನೆ ಶಿಫ್ಟ್ ಮಾಡಿದ್ದನು. ಕಳೆದ ಮೂರು ತಿಂಗಳ ಹಿಂದೆ ಮತ್ತೆ ಮೂವರ ನಡುವೆ ಸ್ನೇಹ ಚಿಗುರೊಡೆದಿದ್ದು, 13ರಂದು ಸಾಯಂಕಾಲ ಅರ್ಬಾಜ್ ಮನೆಗೆ ಆಗಮಿಸಿದ ಇಬ್ಬರು ಆರೋಪಿಗಳು ಬರ್ತಡೇ ಇದೆ ಎಂದು ಬೈಕ್ ಮೇಲೆ ಕರೆದುಕೊಂಡು ಬಂದಿದ್ದಾರೆ. ಜೈನ್​ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದ ಆವರಣದಲ್ಲಿ ಕಂಠಪೂರ್ತಿ ಕುಡಿದು ಪಾರ್ಟಿ ಮಾಡಿದ್ದಾರೆ. ಬಳಿಕ ಇಬ್ಬರೂ ಸೇರಿ ಅರ್ಬಾಜ್​ನಿಗೆ ಕೈಯಲ್ಲಿ ಹಾಕಿದ್ದ ಖಡ್ಗದಿಂದ ಹಲ್ಲೆ ಮಾಡಿ ಕೊಲೆಗೈದು, ಅಲ್ಲಿಂದ ಪರಾರಿಯಾಗಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ