ಬೆಳಗಾವಿಯ ಸೇಂಟ್ ಕ್ಸೇವಿಯರ್ ಶಾಲೆ ಬಳಿಯ ಸೈನಿಕ ಆಸ್ಪತ್ರೆ ಕ್ಯಾಂಪ್ ಕಡೆಗೆ ಹೋಗುವ ರಸ್ತೆ ಕೆಸರಿನಿಂದ ಕೂಡಿದೆ, ಪಾದಚಾರಿಗಳು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ವಹಿಸುವಂತೆ ಸಾಮಾಜಿಕ ಕಾರ್ಯಕರ್ತ ಸಂತೋಷ ದಾರೆಕರ್ ಮನವಿ ಮಾಡಿದ್ದಾರೆ.
ಸೇಂಟ್ ಕ್ಸೇವಿಯರ್ ಶಾಲೆ ಬಳಿಯ ಮಿಲಿಟರಿ ಆಸ್ಪತ್ರೆ ಕ್ಯಾಂಪ್ ಕಡೆಗೆ ಹೋಗುವ ರಸ್ತೆಯನ್ನು ಪ್ರಸ್ತುತ ಪೈಪ್ಲೈನ್ ಹಾಕಲು ರಸ್ತೆಯ ಉದ್ದಕ್ಕೂ ಅಗೆಯಲಾಗುತ್ತಿದೆ. ಹಾಗಾಗಿ ಈ ಸ್ಥಳದಲ್ಲಿ ಭಾರೀ ಯಂತ್ರೋಪಕರಣಗಳಿವೆ. ರಸ್ತೆ ಅಗೆಯುವ ವೇಳೆ ಸಾಕಷ್ಟು
ಮಣ್ಣು ರಸ್ತೆಯ ಮೇಲೆ ಬಿದ್ದಿರುವುದರಿಂದ ರಸ್ತೆಯು ಜಾರುವಂತಿದ್ದು, ಪ್ರಯಾಣಿಕರಿಗೆ ಅಪಾಯಕಾರಿಯಾಗಿದೆ. ಹಾಗಾಗಿ ಎಚ್ಚರಿಕೆ ವಹಿಸುವಂತೆ ದಾರೇಕರ್ ಮನವಿ ಮಾಡಿದ್ದಾರೆ.