Breaking News

ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ಸ್ಮಾರ್ಟ್ ಕಾರ್ಡ್ ವಿತರಿಸಲು ಕೆಎಸ್​ಆರ್​ಟಿಸಿ ಚಿಂತನೆ

Spread the love

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್​​ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ.

ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ.

ಸದ್ಯ ಬಸ್​ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದ್ರೆ ಬಸ್ ಕಿಕ್ಕಿರಿದು ತುಂಬಿದಾಗ ದಾಖಲೆ ಪರಿಶೀಲನೆ ಕಷ್ಟವಾಗುತ್ತಿದೆ. ಹೀಗಾಗಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡುವ ಕುರಿತು ಚಿಂತನೆ ನಡೆಸಲಾಗಿದೆ. ಇದರಿಂದ ನಿರ್ವಾಹಕರಿಗೆ ಟಿಕೆಟ್ ನೀಡುವುದು ಸುಲಭವಾಗಲಿದೆ.

ನಮ್ಮ ಮೆಟ್ರೋ ಮಾದರಿ: ನಮ್ಮ ಮೆಟ್ರೊ ರೈಲು ಸೇವೆಯಲ್ಲಿನ ಟ್ಯಾಪ್ ಆಯಂಡ್ ಟ್ರಾವೆಲ್ ಸ್ಮಾರ್ಟ್ ಕಾರ್ಡ್ ಮಾದರಿಯಲ್ಲೇ ಶಕ್ತಿ ಯೋಜನೆಗೂ ಸ್ಮಾರ್ಟ್ ಕಾರ್ಡ್ ನೀಡಲು ಯೋಜನೆ ಹಾಕಲಾಗಿದೆ. ಮಹಿಳೆಯರು ಬಸ್ ಹತ್ತುವಾಗ ಬಾಗಿಲಲ್ಲಿ ಅಳವಡಿಸುವ ಯಂತ್ರಕ್ಕೆ ಸ್ಮಾರ್ಟ್ ಕಾರ್ಡ್ ಟ್ಯಾಪ್ ಮಾಡಿ ನಂತರ ಇಳಿಯುವಾಗ ಮತ್ತೊಮ್ಮೆ ಟ್ಯಾಪ್ ಮಾಡಬೇಕಿದೆ. ಆಗ ಮಹಿಳಾ ಪ್ರಯಾಣಿಕರು ಎಲ್ಲಿಂದ, ಎಲ್ಲಿಗೆ ಪ್ರಯಾಣಿಸಿದರು ಎಂಬ ನಿಖರ ಮಾಹಿತಿ ಪಡೆಯಬಹುದು.

ಪ್ರತಿ ಸ್ಮಾರ್ಟ್ ಕಾರ್ಡ್​ಗೆ 30 ರೂಪಾಯಿ ವೆಚ್ಚ: ಟ್ಯಾಪ್ ಆಯಂಡ್ ಟ್ರಾವೆಲ್ ಸ್ಮಾರ್ಟ್ ಕಾರ್ಡ್ ನೀಡುವುದರಿಂದ ನಿಗಮದ ಮೇಲಾಗುವ ಆರ್ಥಿಕ ಹೊರೆಯ ಬಗ್ಗೆಯೂ ಗಮನಹರಿಸಬೇಕಾಗಿದ್ದು, ಪ್ರತಿ ಸ್ಮಾರ್ಟ್ ಕಾರ್ಡ್‌ಗೆ ಕನಿಷ್ಟ 20-30 ರೂಪಾಯಿ ತಗುಲಲಿದೆ. ಆದ್ದರಿಂದ ಸ್ಮಾರ್ಟ್ ಕಾರ್ಡ್‌ಗಾಗಿಯೇ 20 ಕೋಟಿಗೂ ಅಧಿಕ ಹಣ ವೆಚ್ಚವಾಗಲಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ