Breaking News

ಬಾಲಕರಿಬ್ಬರಿಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ಸಂಚಲನ ಮೂಡಿಸುತ್ತಿದೆ.

Spread the love

ದಾವಣಗೆರೆ: ಜಿಲ್ಲೆಯಲ್ಲಿ ಬಾಲಕನ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ಸಂಚಲನ ಮೂಡಿಸುತ್ತಿದೆ. ಚನ್ನಗಿರಿಯಲ್ಲಿ ಇಬ್ಬರು ಬಾಲಕರಿಂದ ಓರ್ವ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಸಾಕಷ್ಟು ತಿರುವು ಪಡೆದುಕೊಳ್ಳುತ್ತಿದೆ. ಈ ಘಟನೆ ತಾಲೂಕಿನ ಪ್ರೌಢಶಾಲೆಯೊಂದರಲ್ಲಿ ಜುಲೈ 13 ರಂದು ನಡೆದಿದ್ದು, 14 ರಂದು ಬಾಲಕನ ಪೋಷಕರು ಪೊಲೀಸ್​ ಠಾಣೆಯಲ್ಲಿ ದಾವೆ ಹೂಡಿದ್ದಾರೆ.

ಚನ್ನಗಿರಿ ಪೊಲೀಸ್ ಠಾಣೆ ಎದುರು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಧರಣಿ ನಡೆಸಿದ್ದ ಸಂಬಂಧ ಪ್ರತಿಕ್ರಿಯಿಸಿದ ಎಸ್​ಪಿ ಡಾ ಕೆ ಅರುಣ್, ತಾಲೂಕಿನ ಶಾಲೆಯೊಂದರಲ್ಲಿ ಬಾಲಕರಿಬ್ಬರಿಂದ ಬಾಲಕನಿಗೆ ಲೈಂಗಿಕ ಕಿರುಕುಳವಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಮೂವರು ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಾಲಕನ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಬಗ್ಗೆ ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ, ಶಾಸಕರು ಈ ಘಟನೆ ಸುಳ್ಳು ಎಂದು ಹೇಳುತ್ತಿದ್ದಾರೆ. ಈಗಾಗಲೇ ಪ್ರಕರಣ ದಾಖಲಾಗಿದೆ. ಘಟನೆ ನಿಜವಿರಲಿ ಅಥವಾ ಸುಳ್ಳು ಇರಲಿ ತನಿಖೆ ನಡೆಸಿದ ನಂತರವೇ ಸತ್ಯಾಂಶ ಹೊರಬರಲಿದೆ ಎಂದರು.

ಈ ಪ್ರಕರಣ ಸಂಬಂಧ ಎಎಸ್ಪಿ ಬಸರಗಿ ನೇತ್ವತ್ವದಲ್ಲಿ ತಂಡ ರಚಿಸಲಾಗಿದೆ. ಸಿಸಿಟಿವಿ ಚೆಕ್ ಮಾಡಲು ಸೂಚಿಸಲಾಗಿದೆ. ತನಿಖೆಯಿಂದ ಸತ್ಯಾಂಶ ಗೊತ್ತಾಗುತ್ತದೆ. ಇದೇ ಕಾರಣಕ್ಕೆ ಎಫ್‌ಐಆರ್ ಸಹ ದಾಖಲು ಮಾಡಿ ಮೂರು ಅಪ್ರಾಪ್ತ ಬಾಲಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬಂದ ಮೇಲೆ ನಿಜ ಹೊರಬಿಳಲಿದೆ. ಈ ವಿಚಾರವನ್ನು ಶಾಸಕರಿಗೆ ತಿಳಿಸಿದರೂ ಧರಣಿ ಮಾಡಿದ್ದಾರೆ ಎಂದು ಎಸ್ಪಿ ಹೇಳಿದರು.

ಕಡ್ಡಾಯ ರಜೆ ನೀಡಿದ ಎಸ್​ಪಿ: ಪಿಎಸ್​ಐ ಮತ್ತು ಸಿಪಿಐ ವಿರುದ್ಧ ಆರೋಪವಿರುವ ಕಾರಣ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಬೇಕಂತಲೇ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್ ಹಾಕಲಾಗ್ತಿದೆ ಎಂಬ ಆರೋಪವನ್ನು ಶಾಸಕರು ಮಾಡಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತೇವೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎಎಸ್​ಪಿ ರಾಮಗೊಂಡ ಬಸರಗಿ ತನಿಖೆ ಮಾಡಿ ವರದಿ ಕೊಡಲಿದ್ದಾರೆ. ತನಿಖೆ ಆಗಿ ವರದಿ ಕೊಡುವವರೆಗೂ ಅವರಿಬ್ಬರು ಕಡ್ಡಾಯ ರಜೆಯಲ್ಲಿರುವವರು ಎಂದು ಎಸ್​ಪಿ ತಿಳಿಸಿದರು.

ಶಾಸಕರ ಆರೋಪವೇನು?: ಪ್ರತಿಭಟನೆ ವೇಳೆ ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ್ ವಿ ಶಿವಗಂಗಾರವರು, ಈ ಪ್ರಕರಣ ಸಂಬಂಧ ವಿಚಾರಿಸಲು ಪೋಲಿಸ್ ಠಾಣೆಗೆ ಆಗಮಿಸಿದ್ದೆ. ಇದೀಗ ಕಡ್ಡಾಯ ರಜೆ ಮೇಲೆ ತೆರಳಿರುವ ಚನ್ನಗಿರಿ ಪೋಲಿಸ್ ಠಾಣೆಯ ಪಿಎಸ್‌ಐ ಚಂದ್ರಶೇಖರ್ ಹಾಗೂ ಸಿಪಿಐ ಮಧು ಇವರಿಬ್ಬರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ