Breaking News

ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು’: ಊರ ಹೊರಗಿನ ಗುಡಿಸಲೊಳಗಿಂದ ಯಾರಿಗೂ ಕೇಳಿಸದ ಬಾಣಂತಿ, ಕಂದಮ್ಮನ ಪಾಡು!

Spread the love

ತುಮಕೂರು: ಊರ ಹೊರಗಿನ ಗುಡಿಸಲಿನಲ್ಲಿ ಬಾಣಂತಿ ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳು ವಾಸ ಮಾಡುತ್ತಿದ್ದಾರೆ. ಇದು ಕಾಡುಗೊಲ್ಲ ಸಮುದಾಯದ ಆಚರಣೆ.

ಇಂಥ ಆಚರಣೆಯನ್ನು ಇಂದಿಗೂ ಈ ಸಮುದಾಯ ನಡೆಸಿಕೊಂಡು ಬರುತ್ತಿದೆ. ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಇದಕ್ಕೊಂದು ಉದಾಹರಣೆ ದೊರೆಯಿತು.

ಊರ ಹೊರಗಿರುವ ಗುಡಿಸಲಿನಲ್ಲಿ ವಾಸಿಸುತ್ತಿರುವ ವಸಂತ ಎಂಬ ಬಾಣಂತಿಯದ್ದು ನರಕಯಾತನೆಯಾಗಿದೆ. ತುಂತುರು ಮಳೆ, ಚಳಿ, ಗಾಳಿಯ ನಡುವೆ ಗುಡಿಸಲಿನಲ್ಲಿ ಈಕೆ ಇದ್ದಾರೆ. ಐದು ದಿನಗಳ ಹಿಂದೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಇವರಿಗೆ ಹೆರಿಗೆ ಆಗಿತ್ತು. ಹೆರಿಗೆ ಮುಗಿಸಿ ಮರಳಿ ಗ್ರಾಮಕ್ಕೆ ಬಂದವರನ್ನು ಪೋಷಕರೇ ಮನೆಗೆ ಸೇರಿಸಿಕೊಂಡಿಲ್ಲ. ಊರ ಹೊರಗಿನ ಗುಡಿಸಿಲಿಗೆ ಇವರನ್ನು ಕಳುಹಿಸಿದ್ದಾರೆ. ಇದೀಗ ಸಣ್ಣ ಗುಡಿಸಲಿನಲ್ಲಿ ಬಾಣಂತಿ ಮತ್ತು ಅವಳಿ ಮಗು ವಾಸವಿದ್ದಾರೆ.

“ನಮ್ಮ ದೇವರಿಗೆ ಸೂತಕ ಆಗಲ್ಲ, ಹಾಗಾಗಿ ನಾವು ಮನೆಯೊಳಗೆ ಬಿಟ್ಟುಕೊಳ್ಳುವುದಿಲ್ಲ” ಎನ್ನುತ್ತಾರೆ ಗೊಲ್ಲ ಸಮುದಾಯದವರು. ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು. ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಆಗಲ್ಲ ಎಂಬುದು ಗ್ರಾಮಸ್ಥರ ನಂಬಿಕೆ. ಈ ಮೂಢ ನಂಬಿಕೆಗಳ ನಡುವೆ ಬಾಣಂತಿಯ ಸಂಕಷ್ಟ ಯಾರಿಗೂ ಕೇಳದಾಗಿದೆ.

ದೇಶದ ವಿವಿಧೆಡೆ ವರದಿಯಾದ ಮೂಢನಂಬಿಕೆ ಪ್ರಕರಣಗಳು.. : ಉತ್ತರ ಪ್ರದೇಶದಲ್ಲಿ ತಂತ್ರ ವಿದ್ಯೆ ವಿಚಾರದಲ್ಲಿ ಆಸೆ ಪೂರೈಸಿಕೊಳ್ಳಲು ಮಹಿಳೆಯೊಬ್ಬಳ್ಳು ತನ್ನ ನಾಲ್ಕು ತಿಂಗಳ ಮಗುವನ್ನು ಬಲಿ ಕೊಟ್ಟಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ದೇವಿಯ ಮೂರ್ತಿ ಮುಂದೆಯೇ ಪುಟ್ಟ ಮಗುವನ್ನು ಆಕೆ ಕೊಚ್ಚಿ ಕೊಲೆ ಮಾಡಿದ್ದಳು. ತಂತ್ರ-ಮಂತ್ರ ವಿದ್ಯೆಯ ಮೂಢನಂಬಿಕೆಗೆ ಕಟ್ಟುಬಿದ್ದು, ಮಹಿಳೆ ದುಷ್ಕೃತ್ಯ ಎಸಗಿದ್ದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.

ಕಪ್ಪು ಬೆಕ್ಕು ಅಪಶಕುನ ಎಂದು ಬಲಿ : ಮೂಢನಂಬಿಕೆಗೆ ಮೂಕ ಪ್ರಾಣಿ ಬಲಿಯಾಗಿರುವ ಘಟನೆ ದೆಹಲಿಯಲ್ಲಿ ಕೆಲದಿನಗಳ ಹಿಂದೆ ವರದಿಯಾಗಿತ್ತು. ಅಪಾರ್ಟ್​ಮೆಂಟ್‌ವೊಂದರಲ್ಲಿ 10 ರಿಂದ 12 ಬೆಕ್ಕಿನ ಮರಿಗಳು ವಾಸವಾಗಿದ್ದವು. ಆದರೆ ಎಲ್ಲವೂ ಏಕಾಏಕಿ ಸಾವನ್ನಪ್ಪಿದ್ದವು. ಕಪ್ಪು ಬೆಕ್ಕುಗಳು ಅಪಶಕುನ ಎಂಬ ಮೂಢನಂಬಿಕೆಯಿಂದ ಆಹಾರದಲ್ಲಿ ವಿಷ ಹಾಕಿ ಕೊಂದಿರುವುದು ಬಳಿಕ ಗೊತ್ತಾಗಿದೆ. ಎರಡು ದಿನದಲ್ಲಿ ಬೆಕ್ಕುಗಳು ಅಲ್ಲಲ್ಲಿ ಸತ್ತು ಬಿದ್ದಿರುವುದನ್ನು ಕಂಡ ಕೆಲವು ಪ್ರಾಣಿ ಪ್ರೇಮಿಗಳು ಪೊಲೀಸರಿಗೆ ದೂರು ನೀಡಿದ್ದರು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ