Breaking News

ಪ್ರತಿಪಕ್ಷಗಳ ಸಭೆಯಲ್ಲಿ IAS ಅಧಿಕಾರಿಗಳ ಬಳಕೆಗೆ ಆಕ್ಷೇಪ

Spread the love

ಬೆಂಗಳೂರು: ನಗರದಲ್ಲಿ ನಡೆದ ಮಹಾಘಟಬಂಧನ್ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಆತಿಥ್ಯಕ್ಕಾಗಿ ಐಎಎಸ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ, ಆಡಳಿತ ಹಾಗೂ ಬಿಜೆಪಿ ಸದಸ್ಯರ ನಡುವೆ ಏರಿದ ದನಿಯಲ್ಲಿ ವಾಗ್ವಾದ ನಡೆಯಿತು.

ಕಲಾಪವನ್ನು ಕೆಲಕಾಲ ಮುಂದೂಡಿದ ಪ್ರಸಂಗವೂ ನಡೆಯಿತು. ಬೆಳಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಬಿಜೆಪಿಯ ಹಿರಿಯ ಶಾಸಕ ಆರ್.ಅಶೋಕ್ ವಿಷಯ ಪ್ರಸ್ತಾಪಿಸಿದರು. ಈ ವಿಚಾರದ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿ ಸದನದಲ್ಲಿ ಕಾವೇರಿದ ಸನ್ನಿವೇಶ ಸೃಷ್ಟಿಯಾಯಿತು.

ಬಿಜೆಪಿ ಸದಸ್ಯರು ಸರ್ಕಾರದ ಧೋರಣೆ ವಿರೋಧಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿ ಘೋಷಣೆ ಕೂಗಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಅಶೋಕ್, ರಾಜಕೀಯ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಆತಿಥ್ಯಕ್ಕೆ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಜೈಲಿನಲ್ಲಿದ್ದವರಿಗೆ ಬೇಲ್ ಮೇಲೆ ಇರುವವರಿಗೆ ಅಧಿಕಾರಿಗಳು ಆತಿಥ್ಯ ನೀಡಿದ್ದಾರೆ. ಇದು ಸರ್ಕಾರಿ ಕಾರ್ಯಕ್ರಮವಲ್ಲ, ರಾಜಕೀಯ ಕಾರ್ಯಕ್ರಮ. ರಾಜ್ಯದ ಏಳು ಕೋಟಿ ಜನರ ತೆರಿಗೆ ಪಾವತಿ ಹಣವನ್ನು ಈ ರೀತಿ ಬಳಕೆ ಮಾಡಬಾರದು. ರಾಜಕೀಯ ನಾಯಕರನ್ನು ಐಎಎಸ್ ಅಧಿಕಾರಿಗಳು ಹೋಟೆಲ್‍ಗೆ ಕರೆದುಕೊಂಡು ಹೋಗಲು ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ಇದು ಅಪರಾಧ ಎಂದು ಆರೋಪಿಸಿದರು.

ಇದಕ್ಕೆ ಬಿಜೆಪಿಯ ಹಲವು ಸದಸ್ಯರು ಬೆಂಬಲಿಸಿದರು. ಈ ಪ್ರಸ್ತಾಪಕ್ಕೆ ಉತ್ತರಿಸಿದ ಕಾನೂನು ಸಚಿವ ಎಚ್.ಕೆ. ಪಾಟೀಲ್, ಅಶೋಕ್ ಅವರು ಹಿರಿಯ ನಾಯಕರು. ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ಐಎಎಸ್, ಐಪಿಎಸ್ ಅಧಿಕಾರಿಗಳನ್ನು ರಾಜಕೀಯ ನಾಯಕರನ್ನು ಸ್ವಾಗತಿಸಲು ಅವರನ್ನು ಹೋಟೆಲ್‍ಗಳಿಗೆ ಕರೆದುಕೊಂಡು ಬರಲು ಕಳುಹಿಸಿದ್ದೇವೆ ಎಂಬ ಆರೋಪದಲ್ಲಿ ಹುರುಳಿಲ್ಲ. ಹೊರರಾಜ್ಯದ ಮುಖ್ಯಮಂತ್ರಿಗಳು, ಸಚಿವರು ಕೇಂದ್ರ ಮತ್ತು ರಾಜ್ಯದ ಅಧಿಕಾರಿದಲ್ಲಿದ್ದು, ಬಂದವರಿಗೆ ಶಿಷ್ಟಾಚಾರದಂತೆ ಯಾವ ಗೌರವ ಕೊಡಬೇಕೋ ಕೊಟ್ಟಿದ್ದೇವೆ. ನಾವು ಶಿಷ್ಟಾಚಾರವನ್ನು ಉಲ್ಲಂಘಿಸಿಲ್ಲ. ನಮ್ಮ ಪಕ್ಷದಲ್ಲಿ ನಾಯಕರ, ಕಾರ್ಯಕರ್ತರ ಕೊರತೆ ಇಲ್ಲ. ನಮ್ಮ ನಾಯಕರಿಗೆ ಅಧಿಕಾರಿಗಳಿಂದ ಆತಿಥ್ಯ ಬೇಕಿಲ್ಲ. ನಾವು ಅಧಿಕಾರಿಗಳನ್ನು ರಾಜಕೀಯಕ್ಕಾಗಿ ಬಳಸಿಕೊಂಡಿಲ್ಲ. ದೇಶದ 26 ಪಕ್ಷಗಳು ಒಗ್ಗೂಡಿ ದೃಢ ನಿರ್ಧಾರ ತೆಗೆದುಕೊಂಡಿರುವುದನ್ನು ಸಹಿಸಲಾಗುತ್ತಿಲ್ಲ ಎಂದರು.

ಆಗ ಬಿಜೆಪಿ ಸದಸ್ಯ ಸುನೀಲ್‍ ಕುಮಾರ್ ಸೇರಿದಂತೆ ಹಲವು ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆಗ ಮಧ್ಯಪ್ರವೇಶಿಸಿದ ಸಭಾಧ್ಯಕ್ಷರು, ಕಾನೂನು ಸಚಿವರು ನಿಮ್ಮ ಪ್ರಸ್ತಾಪಕ್ಕೆ ಉತ್ತರ ಕೊಟ್ಟಿದ್ದಾರೆ. ಮುಂದುವರೆಸುವುದು ಬೇಡ. ಕಾರ್ಯಸೂಚಿಯಂತೆ ಕಲಾಪವನ್ನು ಆರಂಭಿಸೋಣ ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ