Breaking News

ಕುಸಿದು ಬಿದ್ದ ಯತ್ನಾಳ್

Spread the love

ಬೆಂಗಳೂರು: ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಇನ್ನು ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಸದಸ್ಯರನ್ನು ಮಾರ್ಷಲ್​ಗಳು ಹೊತ್ತೊಯ್ದಿದ್ದಾರೆ. ಮತ್ತೊಂದು ಕಡೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅಸ್ವಸ್ಥಗೊಂಡು ಕುಸಿದು ಬಿದ್ದ ಪ್ರಕರಣವೂ ನಡೆಯಿತು. ಅಸ್ವಸ್ಥಗೊಂಡ ಅವರನ್ನು ತಕ್ಷಣ ಸ್ಟ್ರೆಚರ್​ನಲ್ಲಿ ಮಾರ್ಷಲ್​ಗಳು ಹೊತ್ತು ಕೊಂಡು ಹೋಗಿ, ಆಸ್ಪತ್ರೆಗೆ ರವಾನಿಸಿದರು. ಸುದ್ದಿ ತಿಳಿದಾಕ್ಷಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದ್ರು.

ಇನ್ನು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್​ ಯುಟಿ ಖಾದರ್​ ಆಸ್ಪತ್ರೆಗೆ ತೆರಳಿ ಯತ್ನಾಳ್​ ಅವರ ಆರೋಗ್ಯವನ್ನು ವಿಚಾರಿಸಿದರು. ಯತ್ನಾಳ್​ ಆರೋಗ್ಗೆ ಸ್ಥೀರವಾಗಿದ್ದು, ಯಾವುದೇ ರೀತಿಯ ಭಯ ಪಡಬೇಕಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರವೇಶದ್ವಾರದ ಗ್ಲಾಸ್ ಪೀಸ್ ಪೀಸ್: ಅಮಾನತು ಆದೇಶವನ್ನು ಖಂಡೀಸಿ ಪ್ರತಿಪಕ್ಷ ಸದಸ್ಯರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದರು. ಸ್ಪೀಕರ್ ಚೇಂಬರ್​​​ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾಗ ಮಾರ್ಷಲ್​ಗಳು ಮಧ್ಯಪ್ರವೇಶಿಸಿದರು. ಈ ವೇಳೆ, ವಿಧಾನಸಭೆ ಪ್ರವೇಶ ದ್ವಾರದ ಬಳಿ ಮಾರ್ಷಲ್ ಹಾಗೂ ಬಿಜೆಪಿ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ನೂಕು ನುಗ್ಗಲು ವೇಳೆ ವಿಧಾನಸಭೆ ಪ್ರವೇಶ ದ್ವಾರದ ಗ್ಲಾಸ್ ಬಾಗಿಲು ಪುಡಿ ಪುಡಿಯಾಯಿತು.

ಕಲಾಪ ರಣಾಂಗಣ: ಇದಕ್ಕೂ ಮುನ್ನ, ಭೋಜನ‌ ವಿರಾಮದ ಬಳಿಕ ವಿಧಾನಸಭೆ ಕಲಾಪ ರಣಾಂಗಣವಾಗಿ ಮಾರ್ಪಟ್ಟಿತು. ಅಮಾನತಾದ 10 ಶಾಸಕರಾದ ಅಶ್ವತ್ಥನಾರಾಯಣ್, ಅರವಿಂದ ಬೆಲ್ಲದ್, ವೇದ ವ್ಯಾಸ್ ಕಾಮತ್, ಆರಗ ಜ್ಞಾನೇಂದ್ರ, ಧೀರಜ್ ಮುನಿರಾಜು, ಆರ್.ಅಶೋಕ್​ರನ್ನು ಮಾರ್ಷಲ್​ಗಳು ಹರಸಾಹಸ ಪಟ್ಟು ಸದನದಿಂದ ಹೊತ್ತೊಯ್ದು, ಹೊರಗೆ ಕಳುಹಿಸಿದರು.


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Spread the loveಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ