Breaking News

ಕುರಿ ಕಾಪಾಡಲು ಹೋದ ಇಬ್ಬರೂ ನೀರು ಪಾಲು- ಕುರಿ ಮಾತ್ರ ಸುರಕ್ಷಿತ

Spread the love

ಕೋಲಾರ: ಕುರಿ ಕಾಪಾಡಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.

 ಮುಳಬಾಗಲು ತಾಲ್ಲೂಕಿನ ಕೀಲು ಹೋಳಲಿ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು, ಮೊದಲಿಗೆ ಕುರಿ ಮೇಯಿಸುತ್ತಿದ್ದ 46 ವರ್ಷದ ತಿಮ್ಮಪ್ಪ ತನ್ನ ಕುರಿಯನ್ನ ರಕ್ಷಣೆ ಮಾಡಲು ಕೆರೆಗೆ ಇಳಿದಿದ್ದಾನೆ. ಕುರಿ ಬಚಾವ್ ಆಗಿ ಬಂದಿದೆ. ಕುರಿಯನ್ನು ಕಾಪಾಡಲು ಹೋಗಿದ್ದ ತಿಮ್ಮಪ್ಪ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಾನೆ.

ಈ ವಿಚಾರ ತಿಳಿದು ಸ್ಥಳಕ್ಕೆ ಧಾವಿಸುವ ತಿಮ್ಮಪ್ಪನ ಭಾಮೈದ 45 ವರ್ಷದ ಗಣೇಶ್, ಶವ ಹುಡುಕಾಟಕ್ಕೆ ಇಳಿಯುತ್ತಾನೆ. ಈತ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಾನೆ. ಇಬ್ಬರಲ್ಲಿ ಭಾಮೈದ ಗಣೇಶ್ ಶವ ಪತ್ತೆಯಾಗಿದ್ದು, ಮತ್ತೊಬ್ಬ ಬಾವ ತಿಮ್ಮಪ್ಪನ ಶವಕ್ಕಾಗಿ ಅಗ್ನಿಶಾಮಕ ದಳ, ಸ್ಥಳೀಯರು ಹಾಗೂ ಪೊಲೀಸ್ ಇಲಾಖೆಯಿಂದ ಹುಡುಕಾಟ ನಡೆಯುತ್ತಿದೆ.

ಸ್ಥಳಕ್ಕೆ ಮುಳಬಾಗಲು ತಹಶೀಲ್ದಾರ್ ಸೋಮಶೇಖರ್, ಮುಳಬಾಗಲು ಗ್ರಾಮಾಂತರ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಶೋಧ ಕಾರ್ಯ ಮುಂದುವರೆದಿದೆ. ಘಟನೆಯಿಂದಾಗಿ ಗ್ರಾಮದ ಜನರೇ ಬೇಸರಗೊಂಡಿದ್ದಾರೆ.


Spread the love

About Laxminews 24x7

Check Also

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Spread the love ಕೋಲಾರ: ಪ್ರಧಾನಿ ಮೋದಿಯವರು ಶನಿ ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿವಾದಿತ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ